ಹೆಬ್ಬಾಳೆ ಸೇತುವೆ ಮುಳುಗಡೆಗೆ ಒಂದೇ ಅಡಿ ಬಾಕಿ – ಕರಾವಳಿಯಲ್ಲಿ ಮತ್ತೆ ಮುಂಗಾರು ಬಿರುಸು

Public TV
1 Min Read

ಚಿಕ್ಕಮಗಳೂರು/ಮಂಗಳೂರು: ಮಲೆನಾಡಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಚಿಕ್ಕಮಗಳೂರು ಜಿಲ್ಲೆಯ ಹೆಬ್ಬಾಳೆ ಸೇತುವೆ ಮುಳುಗಡೆಗೆ ಕೇವಲ ಒಂದೇ ಅಡಿ ಬಾಕಿ ಉಳಿದಿದೆ.

ಹೆಬ್ಬಾಳೆ ಸೇತುವೆ ಮುಳುಗಡೆಯಾದಲ್ಲಿ ಕಳಸ-ಹೊರನಾಡು ಸಂಪರ್ಕ ಕಡಿತ ಕಡಿತವಾಗಲಿದೆ. ಜೀವ ನದಿಗಳು ಮೈದುಂಬಿ ಹರಿಯುತ್ತಿದ್ದು, ತುಂಗಾ, ಭದ್ರಾ, ಹೇಮಾವತಿ ಒಳ ಹರಿವಿನಲ್ಲಿ ಭಾರೀ ಪ್ರಮಾಣದ ಏರಿಕೆಯಾಗಿದೆ.

ಕುದುರೆಮುಖ, ಕಳಸ, ಸಂಸೆ, ಬಾಳೆಹೊಳೆ, ಬಸ್ರೀಕಟ್ಟೆ, ತನಿಕೋಡು ವ್ಯಾಪ್ತಿಯಲ್ಲಿ ಹಾಗೂ ಶೃಂಗೇರಿ, ಎನ್.ಆರ್.ಪುರ, ಮೂಡಿಗೆರೆ, ಕೊಪ್ಪದಲ್ಲೂ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಇತ್ತ ಕರಾವಳಿ ಭಾಗದಲ್ಲೂ ಮಳೆರಾಯನ ಅಬ್ಬ ಜೋರಾಗಿದ್ದು, ಮುಂದಿನ ಮೂರು ದಿನಗಳ ಕಾಲ ಭಾರೀ ಗಾಳಿ ಬೀಸುವ ಕುರಿತು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ತೀರ ಪ್ರದೇಶದಲ್ಲಿ ಸಮುದ್ರ 4 ಮೀಟರ್ ಎತ್ತರಕ್ಕೆ ಅಬ್ಬರಿಸುವ ಸಾಧ್ಯತೆ ಇದ್ದು, ಸುಮಾರು 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಸಿದೆ.

Share This Article
Leave a Comment

Leave a Reply

Your email address will not be published. Required fields are marked *