ಶೃಂಗೇರಿಯಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ-ಜನಜೀವನ ಅಸ್ತವ್ಯಸ್ತ

Public TV
0 Min Read

ಚಿಕ್ಕಮಗಳೂರು: ಶೃಂಗೇರಿಯಲ್ಲಿ ಮಂಗಳವಾರ ಆಲಿಕಲ್ಲು ಸಹಿತ ಮಳೆಯಾಗಿದೆ. ನಾಲ್ಕು ಗಂಟೆ ಸುಮಾರಿಗೆ ಸುರಿದ ಭಾರೀ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು.

ಗುಡುಗು-ಸಿಡಿಲು ಸಹಿತ ಭಾರೀ ಗಾಳಿಯೊಂದಿಗೆ ಸುರಿದ ಮಳೆಯಿಂದಾಗಿ ರಸ್ತೆ ಬದಿಯ ಮರಗಳು ನೆಲಕ್ಕುರುಳಿದ್ರೆ, ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಂಪರ್ಕ ಕೂಡ ಕಡಿತಗೊಂಡಿತ್ತು. ಆಲಿಕಲ್ಲು ಸಮೇತ ಸುರಿದ ಮಳೆ ಕಂಡು ರೈತರು, ಅಡಿಕೆ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ.

ಜಿಲ್ಲೆಯ ಮಲೆನಾಡು ಭಾಗದಲ್ಲೂ ಅಲ್ಲಲ್ಲಿ ಸಾಧಾರಣಾ ಮಳೆಯಾಗಿದೆ. ಆದ್ರೆ, ಶೃಂಗೇರಿಯಲ್ಲಿ ಭಾರೀ ಗುಡುಗು-ಸಿಡಿಲು ಗಾಳಿಯೊಂದಿಗೆ ಧಾರಾಕಾರ ಆಲಿಕಲ್ಲು ಮಳೆ ಸುರಿದಿದೆ.

Share This Article
Leave a Comment

Leave a Reply

Your email address will not be published. Required fields are marked *