ಉಡುಪಿ: ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು (Rain), ರೆಡ್ ಅಲರ್ಟ್ ಘೋಷಣೆಯಾಗಿದೆ. ಇದೀಗ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆ (School), ಪಿಯುಸಿ (College), ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಉಡುಪಿ (Udupi) ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಬೆನ್ನಲ್ಲೇ ಮುನ್ನೆಚ್ಚರಿಕೆಯ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲೆ ಹಾಗೂ ಪಿಯುಸಿ, ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಆದೇಶ ನೀಡಿದ್ದಾರೆ. ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ಭಾರೀ ಮಳೆ – 8 ತಾಲೂಕುಗಳ ಶಾಲೆಗಳಿಗೆ ಜೂ.17 ರಂದು ರಜೆ
ಜಿಲ್ಲೆಯ ಹಲವೆಡೆ ನದಿಗಳು ತುಂಬಿ ಹರಿಯುತ್ತಿದ್ದು, ಬೈಂದೂರಿನ (Baindoor) ಗ್ರಾಮಗಳ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಕೆಲವು ಗ್ರಾಮಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ಇದನ್ನೂ ಓದಿ: ಇರಾನ್ ಸರ್ಕಾರಿ ವಾಹಿನಿ ಮೇಲೆ ಬಾಂಬ್ ದಾಳಿ – ಲೈವ್ನಿಂದಲೇ ಓಡಿ ಹೋದ ನಿರೂಪಕಿ
ಇನ್ನು ಬೈಂದೂರು ತಾಲೂಕಿನಲ್ಲಿ ಎಡೆಬಿಡದೆ ಮಳೆಯಾಗಿದ್ದು, ಸೌಪರ್ಣಿಕಾ, ಸುಮನಾವತಿ, ಸಂಕದ ಗುಂಡಿ, ಎಡ ಮಾವಿನ ಹೊಳೆ ತುಂಬಿ ಹರಿದಿದೆ. ನದಿ ಪಾತ್ರ, ನಾಡ, ನಾವುಂದ, ಮರವಂತೆ, ಬಡಾಕೆರೆ, ಚಿಕ್ಕಳ್ಳಿ, ಪಡುಕೋಣೆ, ಆನಗಳ್ಳಿ, ಹಳಗೇರಿ, ಬಿಜೂರಿ ಪ್ರದೇಶಗಳಲ್ಲಿ ನೆರೆಯ ವಾತಾವರಣ ಸೃಷ್ಟಿಯಾಗಿದೆ. ಒಟ್ಟಾರೆಯಾಗಿ ವರುಣಾರ್ಭಟಕ್ಕೆ ಜಿಲ್ಲೆಯಾದ್ಯಂತ ಜನ ಜೀವನ ಅಸ್ತವ್ಯಸ್ತವಾಗಿದೆ.