ಕಲಬುರಗಿಯಲ್ಲಿ ವರುಣಾರ್ಭಟಕ್ಕೆ ಮೊದಲ ಬಲಿ- ಜನ ಜೀವನ ಅಸ್ತವ್ಯಸ್ತ

Public TV
1 Min Read

ಕಲಬುರಗಿ: ಕಳೆದ ನಾಲ್ಕು ದಿನಗಳಿಂದ ಎಡಬಿಡದೆ ಜಿಲ್ಲಾದ್ಯಂತ ಆರ್ಭಟಿಸುತ್ತಿರುವ ವರುಣಾರ್ಭಟಕ್ಕೆ ಜಿಲ್ಲೆಯಲ್ಲಿ ಮನೆ ಹಾಗೂ ರಸ್ತೆಗಳಿಗೆ ಹಾನಿಯಾಗಿದ್ದು, ಮಳೆಗೆ ಜಿಲ್ಲೆಯಲ್ಲಿ ಮೊದಲ ಬಲಿ ಆಗಿದೆ.

ಆರೀಫಾ ಬೇಗಂ (60) ಮೃತ ವೃದ್ಧೆ. ಮಳೆ ಅಬ್ಬರಕ್ಕ ಚಿತ್ತಾಪೂರ ಪಟ್ಟಣದ ಶಿಥಿಲಗೊಂಡ ಮನೆ ಕುಸಿದು ಆರಿಫಾ ಮೃತಪಟ್ಟಿದ್ದು, ಅವರ ಪತಿ ಸರ್ದಾರ್ ಅಲಿ ಹಾಗೂ ಮಗಳು ಯಾಸ್ಮಿನ್ ಬೇಗಂಗೆ ಸಣ್ಣಪುಟ್ಟ ಗಾಯಗಳಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಹಲವು ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡು ಜನ ಜೀವನ ಅಸ್ತವ್ಯಸ್ತಗೊಂಡಿದೆ. ಅನೇಕ ಮನೆಗಳು, ಅಂಗಡಿಗಳಿಗೆ ನೀರು ನುಗ್ಗಿ ಹಾನಿಯಾಗಿದೆ. ರಸ್ತೆಗಳ ಮೇಲೆ ನೀರು ನಿಂತು ಅವಘಡಗಳು ಸಂಭವಿಸಿವೆ. ಇದನ್ನೂ ಓದಿ: ಅಮರನಾಥ ಯಾತ್ರೆಯಲ್ಲಿರುವ ಬಬಲಾದ ಶ್ರೀಗಳು ಸೇರಿ 55 ಜನ ಸೇಫ್

ಮಳೆಯ ಆರ್ಭಟ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲೆಯಾದ್ಯಂತ ಇಂದು ಒಂದು ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಆದರೆ ನೌಕರಸ್ಥರು, ಖಾಸಗಿ ವಲಯದ ಕೆಲಸಗಾರರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಇನ್ನೂ ಎರಡು ದಿನಗಳ ಕಾಲ ಮಳೆ ಆರ್ಭಟಿಸುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ಜಿಲ್ಲೆಯ ಕೆಲ ಭಾಗಗಳಲ್ಲಿ ರೆಡ್ ಅಲರ್ಟ್ ಹಾಗೂ ಇನ್ನೂ ಕೆಲ ಭಾಗಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ಜನಾಕ್ರೋಶ ಉಲ್ಬಣ – ಪ್ರಧಾನಿ ಸ್ಥಾನಕ್ಕೆ ರನಿಲ್‌ ವಿಕ್ರಮಸಿಂಘೆ ರಾಜೀನಾಮೆ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *