ಭಾರೀ ಮಳೆಗೆ ಕುಸಿದ ಮನೆಯ ಮೇಲ್ಛಾವಣಿ- 4 ಎತ್ತು, 1 ಆಕಳು ಸಾವು

Public TV
1 Min Read

ಹುಬ್ಬಳ್ಳಿ: ಭಾರೀ ಮಳೆಗೆ ಮನೆಯ ಮೇಲ್ಛಾವಣಿ ಮತ್ತು ಗೋಡೆ ಕುಸಿದು ಜಾನುವಾರಗಳು ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಗಣೇಶ ಪೇಟೆಯ ಬಡಾವಣೆಯಲ್ಲಿ ನಡೆದಿದೆ.

ನಗರದ ಗಣೇಶ ಪೇಟೆ ಶೆಟ್ಟರ್ ಓಣಿಯಲ್ಲಿ ಮಲ್ಲಿಕಾರ್ಜುನ್ ಕೊರವಿ ಅವರ ಶಿಥಿಲಾವಸ್ಥೆಯಲ್ಲಿದ್ದ, ಮನೆಯ ಮೇಲ್ಛಾವಣಿ ಮತ್ತು ಗೋಡೆ ಕುಸಿದಿದೆ. ಈ ಪರಿಣಾಮ ನಾಲ್ಕು ಎತ್ತು ಮತ್ತು ಒಂದು ಆಕಳು ಸಾವನ್ನಪ್ಪಿವೆ.

ಎತ್ತುಗಳನ್ನು ಕಳೆದುಕೊಂಡಿದ್ದರಿಂದ ಮನೆಯವರ ಆಕ್ರಂದನ ಮುಗಿಲು ಮುಟ್ಟಿದೆ. ಈ ವೇಳೆ ಮಲ್ಲಿಕಾರ್ಜುನ್ ಅವರ ಮಗಳು ವನಜಾ ಅಸ್ವಸ್ಥಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಆಗಮಿಸಿದ ಉಪನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಜೆಸಿಬಿ ಯಂತ್ರ ಬಳಸಿ ಎತ್ತುಗಳನ್ನು ಹೊರ ತೆಗೆಯಲು ಗ್ರಾಮಸ್ಥರ ಸಹಾಯದಿಂದ ಪೊಲೀಸ್ ಸಿಬ್ಬಂದಿ ಹೊರ ತೆಗೆದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *