ಇಂದಿನಿಂದ ಮೂರು ದಿನ ರಾಜ್ಯದಲ್ಲಿ ಮಳೆ – ಕರಾವಳಿಗೆ ಯಲ್ಲೋ ಅಲರ್ಟ್‌

Public TV
1 Min Read

ಬೆಂಗಳೂರು: ರಾಜ್ಯದಲ್ಲಿ (Karnataka) ಇಂದಿ‌ನಿಂದ ಮೂರು ದಿನ ಮಳೆಯಾಗಲಿದೆ. ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಜೋರು ಮಳೆ (Heavy Rain) ಸುರಿಯುವ ಸಾಧ್ಯತೆಯಿದೆ.

ಇಂದು ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್, ಕರಾವಳಿಗೆ (Coastal Karnataka) ಯಲ್ಲೋ ಅಲರ್ಟ್ ಘೋಷಣೆಯಾಗಿದೆ. ಈ ಎರಡೂ ಭಾಗದಲ್ಲಿ ಗುಡುಗು ಮಿಂಚು ಸಹಿತ ಜೋರು ಮಳೆಯಾಗಲಿದೆ. ಇದನ್ನೂ ಓದಿ: ಅರಣ್ಯ ಸಿಬ್ಬಂದಿ, ಬೇಟೆಗಾರರ ನಡುವೆ ಗುಂಡಿನ ಚಕಮಕಿ – ಓರ್ವ ಗುಂಡೇಟಿಗೆ ಬಲಿ


ಬೆಂಗಳೂರಿನನಲ್ಲಿ ತಡ ರಾತ್ರಿ ಮಳೆ ಸುರಿದಿತ್ತು. ಇಂದುಸಂಜೆ ಬಳಿಕ ಬೆಂಗಳೂರಿನಲ್ಲಿ ಜೋರು ಮಳೆಯಾಗುವ ಸಾಧ್ಯತೆಯಿದೆ.

ಶನಿವಾರ ರಾತ್ರಿ ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ರಾಮನಗರ, ಶಿವಮೊಗ್ಗ ಮಂಡ್ಯ, ಬೆಂಗಳೂರಿನ ಭಾಗದ ಹಲವೆಡೆ ರಾತ್ರಿ ಜೋರು ಮಳೆಯಾಗಿದೆ.

 

Share This Article