ಬಿರುಗಾಳಿ ಸಹಿತ ಮಳೆ – ರೇಷ್ಮೆ ಗೂಡಿಗೆ ಸಿಡಿಲು ಬಡಿದು ರೈತ ಸಾವು

Public TV
1 Min Read

ದಾವಣಗೆರೆ: ರೇಷ್ಮೆ ಗೂಡಿಗೆ ಸಿಡಿಲು ಬಡಿದು ರೈತ ಸಾವನ್ನಪ್ಪಿದ ಘಟನೆ ವಿಜಯನಗರ (Vijayanagara) ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನಲ್ಲಿ ನಡೆದಿದೆ.

ಹರಪನಹಳ್ಳಿ ತಾಲೂಕಿನಾದ್ಯಾಂತ ಬಿರುಗಾಳಿ ಸಹಿತ ಭಾರೀ ಮಳೆಯಾದ ಪರಿಣಾಮ ನಾನಾ ಅವಾಂತರಗಳು ಸೃಷ್ಟಿಯಾಗಿವೆ. ಮಳೆಯ ಪರಿಣಾಮ ಸಿಡಿಲು ಬಡಿದು ಹುಣಸೆಕಟ್ಟೆಯ ರೈತ ಬಸವರಾಜಪ್ಪ ಸಾವನ್ನಪ್ಪಿದ್ದಾರೆ. ಏಕಾಏಕಿ ಗಾಳಿ ಸಹಿತ ಮಳೆ ಶುರುವಾಗಿದ್ದರಿಂದ ಬಸವರಾಜಪ್ಪ ರೇಷ್ಮೆ ಗೂಡಿನ ಬಳಿ ಕೆಲಸ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಸಿಡಿಲು ಬಡಿದು ದುರಂತ ಸಂಭವಿಸಿದೆ. ಇದನ್ನೂ ಓದಿ: ಮುತ್ತಪ್ಪ ರೈ ಕುಟುಂಬದ ಮೇಲೆ ಸಾಕಷ್ಟು ಜನರಿಗೆ ದ್ವೇಷ ಇದೆ: ಪ್ರಕಾಶ್‌ ರೈ

ಅಲ್ಲದೇ ಅಡವಿಹಳ್ಳಿಯ ಸಮೀಪದ ಹೊಂಬಳಗಟ್ಟೆ ಬಳಿ ಧರೆಗುರುಳಿದ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ನಂದಿಬೇವೂರಿನಲ್ಲಿಯೂ ವಿದ್ಯುತ್ ಕಂಬಗಳು ಧರೆಗುರುಳಿವೆ. ಇದನ್ನೂ ಓದಿ: ಜನಿವಾರ ಹಾಕಿದ್ದಕ್ಕೆ ಸಿಇಟಿ ಪರೀಕ್ಷೆಗೆ ಕೂರಿಸದ ಪ್ರಕರಣ – ಶಿವಮೊಗ್ಗದ ದೊಡ್ಡಪೇಟೆ ಠಾಣೆಯಲ್ಲಿ FIR

ಇನ್ನು ಬಿರು ಬೇಸಿಗೆಯಿಂದ ಬಸವಳಿದಿದ್ದ ಗಡಿ ಜಿಲ್ಲೆ ಚಾಮರಾಜನಗರದಲ್ಲಿಯೂ ವರುಣನ ಆಗಮನವಾಗಿದೆ. ಜಿಲ್ಲೆಯ ಹನೂರು ತಾಲೂಕಿನ ಅಜ್ಜಿಪುರದಲ್ಲಿ ಅರ್ಧ ಘಂಟೆಗೂ ಅಧಿಕ ಕಾಲ ಭಾರಿ ಬಿರುಗಾಳಿ ಸಹಿತ ಮಳೆ ಸುರಿದಿದೆ. ಇದನ್ನೂ ಓದಿ: ರಸ್ತೆ ಗುಂಡಿ ಬಗ್ಗೆ ದೂರು ಕೊಟ್ಟವರ ಎಕ್ಸ್ ಖಾತೆ ಬ್ಲಾಕ್; ಬಿಬಿಎಂಪಿ ನಡೆಗೆ ಸಾರ್ವಜನಿಕರ ಆಕ್ರೋಶ

Share This Article