ಕಾರವಾರ ಡಿಪೋಗೆ ನುಗ್ಗಿದ ನೀರು – 50ಕ್ಕೂ ಹೆಚ್ಚು ಬಸ್ಸುಗಳು ಜಲಾವೃತ

Public TV
1 Min Read

ಕಾರವಾರ: ಉತ್ತರ ಕನ್ನಡದಲ್ಲಿ (Uttara Kannada) ಭಾರೀ ಮಳೆಯಾಗುತ್ತಿದ್ದು (Rain) ನಗರದಲ್ಲಿರುವ ಕೆಎಸ್‌ಆರ್‌ಟಿಸಿ (KSRTC) ಬಸ್‌ ಡಿಪೋ (Bus Depot) ಜಲಾವೃತವಾಗಿದೆ.

50ಕ್ಕೂ ಹೆಚ್ಚು ಬಸ್ಸುಗಳು ನೀರಿನಲ್ಲಿ ಜಲಾವೃತವಾಗಿದ್ದು ವಿವಿಧ ಭಾಗಗಳಿಗೆ ತೆರಳುವ ಬಸ್ಸುಗಳ ಸೇವೆಯಲ್ಲಿ ವ್ಯತ್ಯಯವಾಗಿದೆ.  ಇದನ್ನೂ ಓದಿ: ಕಬಿನಿ ಡ್ಯಾಂ ಭರ್ತಿ – 25 ಸಾವಿರ ಕ್ಯುಸೆಕ್‌ ನೀರು ಬಿಡುಗಡೆ

ಹಬ್ಬುವಾಡ ರಸ್ತೆಯಲ್ಲಿ ಡಿಪೋ ಇದ್ದು ಬಸ್ಸುಗಳನ್ನು ಹೊರ ತೆಗೆಯಲು ಚಾಲಕರು ಹರಸಾಹಸ ಪಡುತ್ತಿದ್ದಾರೆ. ಮೂರು ದಿನಗಳಿಂದ ಬಿಟ್ಟು ಬಿಡದೇ ಮಳೆ ಸುರಿಯುತ್ತಿದ್ದು, ಚರಂಡಿ ನೀರು ಡಿಪೋಗೆ ನುಗ್ಗಿದ ಪರಿಣಾಮ ಸಮಸ್ಯೆಯಾಗಿದೆ.

ಹೊನ್ನಾವರ ಭಾಸ್ಕೇರಿ ವರ್ನಕೇರಿ ಬಳಿ ಮತ್ತೆ ಗುಡ್ಡ ಕುಸಿತವಾಗಿದ್ದು ರಾಷ್ಟ್ರೀಯ ಹೆದ್ದಾರಿ 69 ಸಂಚಾರ ತಾತ್ಕಾಲಿಕ ಬಂದ್‌ ಆಗಿತ್ತು. ಹೊನ್ನಾವರ -ಬೆಂಗಳೂರು ರಸ್ತೆಯಲ್ಲಿ ನೂರಾರು ವಾಹನಗಳು ಬೆಳಗ್ಗೆ ನಿಂತಿದ್ದವು. ಗುಡ್ಡ ತೆರವು ಮಾಡಿದ ಬಳಿಕ ಈಗ ವಾಹನಗಳು ಸಂಚರಿಸುತ್ತಿವೆ.

Share This Article