ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಮುಂಗಾರು ಮಳೆಯ (Monsoon Rain) ಆರ್ಭಟ ಮುಂದುವರಿಯಲಿದೆ. ಜೂನ್ 26ರ ವರೆಗೆ ಕರಾವಳಿ (Karavali) ಭಾಗದಲ್ಲಿ ಭಾರೀ ಮಳೆ ಆಗಲಿದ್ದು, ಉಳಿದೆಲ್ಲಾ ಕಡೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ (Dakshina Kannada), ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಜೂನ್ 26ರ ವರೆಗೂ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಇದನ್ನೂ ಓದಿ: ಬೆಂಗಳೂರಿನ 17ಕ್ಕೂ ಹೆಚ್ಚು ಡ್ಯಾನ್ಸ್ ಬಾರ್ಗಳ ಮೇಲೆ ಪೊಲೀಸರ ದಿಢೀರ್ ದಾಳಿ
ಇನ್ನುಳಿದಂತೆ ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬಳ್ಳಾರಿಯಲ್ಲಿ ಒಣಹವೆ ಇರಲಿದೆ. ಉಪ್ಪಿನಂಗಡಿ, ಗೇರುಸೊಪ್ಪ, ಮಂಕಿ, ಯಲ್ಲಾಪುರ, ಆಗುಂಬೆ, ಕೊಟ್ಟಿಗೆಹಾರ, ಕಮ್ಮರಡಿ, ಭಾಗಮಂಡಲ, ಹುಂಚದಕಟ್ಟೆ, ಶಿರಾಲಿ, ಕದ್ರಾ, ಸುಳ್ಯ, ಕುಮಟಾ, ಧರ್ಮಸ್ಥಳ, ಬನವಾಸಿ, ಜೋಯ್ಡಾ, ಬೆಳ್ತಂಗಡಿ, ಹೊನ್ನಾವರ, ತ್ಯಾಗರ್ತಿ, ಖಾನಾಪುರ್, ಗುತ್ತಲ್, ಆನವಟ್ಟಿ, ಕಳಸ, ವಿರಾಜಪೇಟೆ, ಹೊಸಕೋಟೆ, ಅಂಕೋಲಾ, ಪುತ್ತೂರ್, ಮೂಡುಬಿದಿರೆ, ಬಂಟವಾಳ, ಸಿದ್ದಾಪುರ, ಮಾಣಿ, ಕಾರವಾರ, ಮುಂಡಗೋಡಿನಲ್ಲಿ ಸಾಧಾರಣ ಮಲೆಯಾಗಲಿದ್ದು, ಉಳಿದೆಡೆ ಒಣಹವೆ ಮುಂದುವರಿಯಲಿದೆ. ಇದನ್ನೂ ಓದಿ: ಹುಲಿ ದಾಳಿಗೆ ಕುರಿಗಾಹಿ ಮಹಿಳೆ ಬಲಿ- 9 ದಿನಕ್ಕೆ ಜಿಲ್ಲೆಯಲ್ಲಿ 2ನೇ ಸಾವು
3