ಮಳೆಯಿಂದಾಗಿ ಆಗುಂಬೆಯಲ್ಲಿ ಭೂ ಕುಸಿತ, ಭಾರೀ ವಾಹನಗಳ ಸಂಚಾರ ನಿಷೇಧ

Public TV
1 Min Read

ಉಡುಪಿ: ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಗುಡ್ಡ ಕುಸಿತ ಉಂಟಾಗಿದ್ದರಿಂದ ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ಶಿವಮೊಗ್ಗದಿಂದ ಆಗುಂಬೆ ಮಾರ್ಗವಾಗಿ ಉಡುಪಿಗೆ ಸಂಚರಿಸುವ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ್ ಮೇರಿ ಫ್ರಾನ್ಸಿಸ್ ಆದೇಶ ಹೊರಡಿಸಿದ್ದಾರೆ.

ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಪ್ರಿಯಾಂಕ್ ಮೇರಿ ಫ್ರಾನ್ಸಿಸ್ ಅವರು, ಈ ಮಾರ್ಗವಾಗಿ ಸಂಚರಿಸುವ ಭಾರೀ ಸಾಮಥ್ರ್ಯದ ಲಾರಿ, ಟಿಪ್ಪರ್ ಹಾಗೂ ಬಸ್ ಸಂಚಾರ ನಿರ್ಬಂಧಿಸುವಂತೆ ಆದೇಶಿಸಿದ್ದಾರೆ. ಈ ಕುರಿತಂತೆ ಜಿಲ್ಲಾಧಿಕಾರಿಗಳು ಅತ್ಯಂತ ಬೇಗ ರಸ್ತೆ ರಿಪೇರಿ ಮಾಡುವಂತೆ ಹೆದ್ದಾರಿ ಪ್ರಾಧಿಕಾರಕ್ಕೆ ಆದೇಶಿಸಿದ್ದಾರೆ. ರಸ್ತೆಯ ಪಕ್ಕದಲ್ಲಿ ಎಚ್ಚರಿಕೆ ಫಲಕ ಹಾಕಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಭಾರೀ ಮಳೆಗೆ ಗುರುವಾರ ಆಗುಂಬೆ ಘಾಟಿಯ 7ನೇ ತಿರುವಿನಲ್ಲಿ ರಸ್ತೆ ಕುಸಿತ ಉಂಟಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ್ದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಪೊಲೀಸರು ಪರಿಶೀಲನೆ ನಡೆಸಿ, ಭಾರೀ ವಾಹನಗಳ ಸಂಚಾರಕ್ಕೆ ತಡೆ ನೀಡಿದ್ದರು. ಮಳೆಯಿಂದ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *