ತಾಂತ್ರಿಕ ಸಮಿತಿ ವರದಿ ಆಧರಿಸಿಯೇ ಹೇಮಾವತಿ ಕೆನಾಲ್ ನಿರ್ಮಾಣ: ಪರಮೇಶ್ವರ್

Public TV
1 Min Read

ಬೆಂಗಳೂರು: ತಾಂತ್ರಿಕ ಸಮಿತಿ ವರದಿ ಆಧರಿಸಿ ಹೇಮಾವತಿ ಕೆನಾಲ್ ನಿರ್ಮಾಣದ (Hemavati Link Canal) ಕೆಲಸ ಪ್ರಾರಂಭ ಮಾಡಿದ್ದೇವೆ. ಈಗ ಬಿಜೆಪಿ (BJP) ಶಾಸಕರು ಗಲಾಟೆ ಮಾಡಿಸುತ್ತಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ (G Parameshwar) ಆರೋಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹೇಮಾವತಿ ಕೆನಾಲ್ ಮಾಡುವುದಕ್ಕೆ ತಾಂತ್ರಿಕ ಸಮಿತಿ ರಚನೆ ಮಾಡಿ ವರದಿ ಕೇಳಿದ್ದೆವು. ಯೋಜನೆ ಮಾಡಿ ಯಾವುದೇ ತೊಂದರೆ ಇಲ್ಲ ಎಂದು ವರದಿ ಹೇಳಿತ್ತು. ವರದಿ ಮುಂದಿಟ್ಟುಕೊಂಡು ಕೆಲಸ ಆರಂಭ ಮಾಡಲಾಗಿದೆ. ಈಗ ಬಿಜೆಪಿ ಶಾಸಕರು ಪ್ರತಿಭಟನೆ ಮಾಡಿಸಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಚಪ್ಪಲಿಯಿಂದ ಹೊಡೆದಿದ್ದು ತುಂಬಾ ಬೇಜಾರಾಗಿದೆ, ಯಾವ್ದೇ ಕಾರಣಕ್ಕೂ ಕೇಸ್ ವಾಪಸ್ ಪಡೆಯಲ್ಲ: ಆಟೋ ಚಾಲಕ

ಈಗ ನಾನು ತುಮಕೂರಿಗೆ ಹೋಗುತ್ತಿದ್ದೇನೆ. ಅಧಿಕಾರಿಗಳ ಸಭೆ ಕರೆದು ಚರ್ಚೆ ಮಾಡುತ್ತೇನೆ. ಯಾವುದೇ ಸಮಸ್ಯೆ ಇಲ್ಲದೇ ಕೆಲಸ ಮುಂದುವರಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಪ್ರಚೋದನಕಾರಿ ಭಾಷಣ – ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ಕೇಸ್‌ ದಾಖಲು

ಕೆನಾಲ್ ಯೋಜನೆ ವಿರುದ್ಧ ಪ್ರತಿಭಟನೆ ಮಾಡಿದ ಸ್ವಾಮೀಜಿಗಳ ಮೇಲೆ ಎಫ್‌ಐಆರ್ ದಾಖಲು ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅದಕ್ಕಾಗಿಯೇ ಈಗ ತುಮಕೂರಿಗೆ ಹೊರಟಿದ್ದೇನೆ. ಅಲ್ಲಿ ಸಭೆ ನಡೆಸಿ ಮುಂದಿನ ತೀರ್ಮಾನ ಮಾಡುತ್ತೇವೆ ಎಂದರು. ಇದನ್ನೂ ಓದಿ: ಈ ಸಲ ಕಪ್ ನಮ್ದು, ಒನ್‌ ಡೇ ಪಾನಿಪುರಿ ನಿಮ್ದು..!- RCB ಅಭಿಮಾನಿಯಿಂದ ಫ್ರೀ ಚಾಟ್ಸ್

ತುಮಕೂರಿನ ತರಕಾರಿ ಮಾಗಡಿಯಲ್ಲಿ ಮಾರಾಟ ಮಾಡಲು ಬಿಡಲ್ಲ ಎಂಬ ಕಾಂಗ್ರೆಸ್ ಶಾಸಕರ ಹೇಳಿಕೆಗೆ ಪ್ರತಿಕ್ರಿಯಿಸಿ, ಒಬ್ಬೊಬ್ಬ ಶಾಸಕರು ಒಂದೊಂದು ರೀತಿ ಮಾತನಾಡುತ್ತಿದ್ದಾರೆ. ಆ ರೀತಿಯಲ್ಲಿ ಯಾರೂ ಮಾತನಾಡಬಾರದು. ಎಲ್ಲಾ ಶಾಸಕರು ಸಂಯಮದಿಂದ ಹೋಗಬೇಕು ಎಂದು ಹೇಳಿದರು. ಇದನ್ನೂ ಓದಿ: ಜೂ.8ರವರೆಗೆ ರಾಜ್ಯದಲ್ಲಿ ಸಾಧಾರಣ ಮಳೆ

Share This Article