ದೂದ್ ಸಾಗರ್ ಬಳಿ ಗುಡ್ಡ ಕುಸಿತ – ರೈಲು ಸಂಚಾರದಲ್ಲಿ ವ್ಯತ್ಯಯ

Public TV
1 Min Read

ಬೆಳಗಾವಿ: ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಧಾರಾಕಾರ ಮಳೆಗೆ ಕರ್ನಾಟಕ-ಗೋವಾ ಗಡಿಭಾಗದಲ್ಲಿರುವ ದೂದ್ ಸಾಗರ್ (Dudhsagar) ಬಳಿ ಗುಡ್ಡ ಕುಸಿದಿದ್ದು, ಯಾವುದೇ ರೀತಿಯ ಅಹಿತಕರ ಘಟನೆ ಸಂಭವಿಸಿಲ್ಲ.

ಭಾನುವಾರ ಸಂಜೆ 6 ಗಂಟೆಗೆ ಗುಡ್ಡ ಕುಸಿದು ರೈಲ್ವೆ ಟ್ರಾಕ್ (Railway Track) ಮೇಲೆ ಮಣ್ಣು, ಬಂಡೆಗಳು ಬಿದ್ದಿವೆ. ಘಟನೆಯ ಪರಿಣಾಮ ನಾಲ್ಕು ಗಂಟೆಗಳ ಕಾಲ ಬೆಳಗಾವಿ- ಗೋವಾ ಮಧ್ಯೆ ರೈಲ್ವೆ ಸಂಚಾರದಲ್ಲಿ ವ್ಯತ್ಯಯವಾಗಿತ್ತು. ಮಣ್ಣು-ಬಂಡೆಗಳ ತೆರವಿಗೆ ಗೋವಾದ ಅಗ್ನಿಶಾಮಕ ದಳದ ಠಾಣೆ ಸಿಬ್ಬಂದಿಗಳು, ರೈಲ್ವೆ ಪೊಲೀಸರ ಹರಸಾಹಸಪಟ್ಟರು. ಇದನ್ನೂ ಓದಿ: ಭೀಮನ ಅಮವಾಸ್ಯೆ; ರಾಜ್ಯಾದ್ಯಂತ ದೇವಾಲಯಗಳಲ್ಲಿ ವಿಶೇಷ ಪೂಜೆ – ಮಹಿಳೆಯರಿಂದ ಪ್ರಾರ್ಥನೆ

ಭಾನುವಾರ ದೂದ್ ಸಾಗರ್ ಜಲಪಾತ ವೀಕ್ಷಣೆಗೆ ಅಪಾರ ಪ್ರಮಾಣದಲ್ಲಿ ಪ್ರವಾಸಿಗರು ತೆರಳಿದ್ದರು. ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ. ರಾತ್ರಿ 10 ಗಂಟೆಯ ಬಳಿಕ ರೈಲುಗಳ ಕಾರ್ಯಾಚರಣೆ ಪುನರಾರಂಭವಾಗಿದೆ. ಇದನ್ನೂ ಓದಿ: ಪರಿಷತ್‍ನಲ್ಲಿ ಕೆ.ಟಿ ಶ್ರೀಕಂಠೇಗೌಡ ಅತ್ಯುತ್ತಮ ಶಾಸಕ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್