ಮಾಜಿ ಸಚಿವ ಹೆಚ್ ಎಂ ರೇವಣ್ಣ ಪುತ್ರನಿಂದ ಹಿಟ್‌ & ರನ್‌ – ಸವಾರ ಸಾವು

1 Min Read

ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ, ಮಾಜಿ ಸಚಿವ ಹೆಚ್ ಎಂ ರೇವಣ್ಣ (HM Revanna) ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವನ್ನಪ್ಪಿದ ಘಟನೆ ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಬಳಿ ನಡೆದಿದೆ.

ರೇವಣ್ಣ ಪುತ್ರ ಶಶಾಂಕ್‌ (Shashank) ಫಾರ್ಚೂನರ್ ಕಾರ್ ಬೈಕಿಗೆ ಡಿಕ್ಕಿ ಹೊಡೆದು ಸವಾರ ರಾಜೇಶ್ (23) ಸಾವನ್ನಪ್ಪಿದ್ದಾರೆ. ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಟೋಲ್‌ ನೂರು ಮೀಟರ್ ಬಳಿ ಕಾರು ಗುದ್ದಿದೆ. ಇದನ್ನೂ ಓದಿ:  ಹೈವೇಗಳಲ್ಲಿ ರಾತ್ರಿ ವಾಹನ ಓಡಿಸೋವಾಗ ಎಚ್ಚರವಾಗಿರಿ – ಗಾಬರಿ ಹುಟ್ಟಿಸುತ್ತೆ ಸರ್ಕಾರಿ ಅಂಕಿ-ಅಂಶಗಳು

 

ಗುರುವಾರ ರಾತ್ರಿ 10:30 ರ ಸುಮಾರಿಗೆ ಅಪಘಾತ ಎಸಗಿದ ಬಳಿಕ ಶಶಾಂಕ್‌ ಕಾರಿನೊಂದಿಗೆ ಪರಾರಿಯಾಗಿದ್ದರು. ಈ ವಿಚಾರ ತಿಳಿದ ಸ್ಥಳೀಯರು 5 ಕಿ.ಮೀ. ಹಿಂಬಾಲಿಸಿ ಸನ್‌ ಫ್ಲವರ್‌ ಫ್ಯಾಕ್ಟರಿ ಬಳಿ ಅಡ್ಡಗಟ್ಟಿ ಕಾರನ್ನು ತಡೆದು ನಿಲ್ಲಿಸಿದ್ದಾರೆ.

ಕಾರಿನಿಂದ ಇಳಿದ ಬಳಿಕ ಶಶಾಂಕ್‌ ನಾನು ಯಾರು ಗೊತ್ತಾ? ಹೆಚ್‌ಎಂ ರೇವಣ್ಣ ಪುತ್ರ ಎಂದು ಅವಾಜ್‌ ಹಾಕಿದ್ದಾರೆ. ನಂತರ ಕಾರನ್ನು ಬದಿಯಲ್ಲಿ ನಿಲ್ಲಿಸುತ್ತೇನೆ ಎಂದು ಹೇಳಿ ಶಶಾಂಕ್‌ ಪರಾರಿಯಾಗಿದ್ದಾರೆ. ಕಾರಿನಲ್ಲಿ ರೇವಣ್ಣ ಕುಟುಂಬಸ್ಥರು ಇದ್ದ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಹಿಟ್‌ ಆಂಡ್‌ ರನ್‌ (Hit and Run) ವಿಚಾರ ದೊಡ್ಡದಾಗುತ್ತಿದ್ದಂತೆ ತಡರಾತ್ರಿ ಫಾರ್ಚೂನರ್ ಕಾರನ್ನು ಕುದೂರು ಪೊಲೀಸ್ ಠಾಣೆಗೆ ತರಲಾಗಿದೆ.

Share This Article