ಪಾದಯಾತ್ರೆ ನಿಲ್ಲಿಸದಿದ್ದರೆ ಕಾನೂನು ಪ್ರಕಾರ ನಿಲ್ಲಿಸುತ್ತೇವೆ: ಆರಗ ಜ್ಞಾನೇಂದ್ರ

Public TV
1 Min Read

ಬೆಂಗಳೂರು: ಕಾಂಗ್ರೆಸ್ ಪಾದಯಾತ್ರೆ ನಿಲ್ಲಿಸದಿದ್ದರೆ ಕಾನೂನು ಪ್ರಕಾರ ನಿಲ್ಲಿಸುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಪಾದಯಾತ್ರೆ ಬಗ್ಗೆ ಜವಾಬ್ದಾರಿಯುತ ಪಕ್ಷ ರಾಜಕೀಯ ಲಾಭಕ್ಕೆ ಹೇಗೆ ನಡೆದುಕೊಳ್ಳುತ್ತಿದೆ ಅಂತ ತೋರಿಸಿದೆ. ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಹೈಕೋರ್ಟ್ ಪಾದಯಾತ್ರೆ ನಿಲ್ಲಿಸುವಂತೆ ಆದೇಶ ಹೊರಡಿಸಿದೆ. ಪಾದಯಾತ್ರೆಯಿಂದಾಗಿ ಜನ ಆತಂಕಗೊಂಡಿದ್ದಾರೆ ಎಂದರು. ಇದನ್ನೂ ಓದಿ: ಪಾದಯಾತ್ರೆ ತಡೆಯಲು ಯಾರಿಗೆ ಕಾಯುತ್ತಿದ್ದೀರಿ – ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ

ಪಾದಯಾತ್ರೆಯಲ್ಲಿ ಇರುವವರಿಗೆ ಹೆಚ್ಚಾಗಿ ಕೊರೊನಾ ಪಾಸಿಟಿವ್ ಬರುತ್ತಿದೆ. ವೀರಪ್ಪ ಮೊಯ್ಲಿ, ಮಲ್ಲಾಜಮ್ಮ, ಶಿವಶಂಕರ್ ರೆಡ್ಡಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇವರೆಲ್ಲ ಗೊತ್ತಿರುವವರು. ಆದರೆ ಗೊತ್ತಿಲ್ಲದೇ ಇರುವ ಹಲವರಿಗೂ ಸಹ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ಇದು ಕೊರೊನಾ ಹರಡುವ ಪಾದಯಾತ್ರೆ ಎಂದು ಕಿಡಿಕಾರಿದರು.

ಸದ್ಯ ಕಾಂಗ್ರೆಸ್ ಸಭೆ ನಡೆಸುತ್ತಿದೆ. ಒಳ್ಳೆಯ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬ ವಿಶ್ವಾಸ ಇದೆ. ಕಾಂಗ್ರೆಸ್ ಪಾದಯಾತ್ರೆ ನಿಲ್ಲಿಸದಿದ್ದರೆ ಕಾನೂನು ಪ್ರಕಾರ ನಿಲ್ಲಿಸುತ್ತೇವೆ. ಕಾಯಿದೆ ಪ್ರಕಾರ ಪಾದಯಾತ್ರೆ ನಿಲ್ಲಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿವೆ. ಈಗಾಗಲೇ ಬುಧವಾರ ರಾತ್ರಿಯೇ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಇದನ್ನೂ ಓದಿ: ನಿಮ್ದು ದುರ್ಯೋಧನನ ರೀತಿ ಕೆಟ್ಟ ಹಠ: ಸಿದ್ದು, ಡಿಕೆಶಿಗೆ ಅಶೋಕ್ ಗುದ್ದು

ಬುಧವಾರ ಡಿ.ಕೆ ಸುರೇಶ್ ಅವರು, ಗಾಳಿ ಸುದ್ದಿಗಳಿಗೆ ಕಿವಿಗೊಡಬೇಡಿ. ಸರ್ಕಾರ ಯಾವುದೇ ಆದೇಶ ನೀಡಲಿ ಪಾದಯಾತ್ರೆ ನಿಲ್ಲಲ್ಲ. ನಾಳೆ ಬೆಳಗ್ಗೆ ಪಾದಯಾತ್ರೆ ಮುಂದುವರಿಯುತ್ತದೆ ಎಂದು ಹೇಳಿದ್ದರು.

Share This Article
Leave a Comment

Leave a Reply

Your email address will not be published. Required fields are marked *