ಶವಸಂಸ್ಕಾರಕ್ಕೆ ತೆರಳಿದ್ದ ವೇಳೆ ಹೆಜ್ಜೇನು ದಾಳಿ – ಓರ್ವ ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ

Public TV
1 Min Read

ಚಾಮರಾಜನಗರ: ಶವಸಂಸ್ಕಾರಕ್ಕೆ (Cremation) ತೆರಳಿದ್ದ ವೇಳೆ ಸ್ಮಶಾನದ ಮರವೊಂದರಲ್ಲಿ ಗೂಡು ಕಟ್ಟಿದ್ದ ಹೆಜ್ಜೇನು ದಾಳಿ (Honeybee Attack) ನಡೆಸಿ ಓರ್ವ ಮೃತಪಟ್ಟಿರುವ ಘಟನೆ ಚಾಮರಾಜನಗರ (Chamarajanagara) ಜಿಲ್ಲೆಯ ಕೊಳ್ಳೇಗಾಲ (Kollegala) ತಾಲೂಕಿನ ಕೊಂಗರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಚೆನ್ನಪ್ಪ (60) ಎಂಬವರು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಂಗರಹಳ್ಳಿ ಗ್ರಾಮದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಈ ಹಿನ್ನೆಲೆ ಕುಟುಂಬಸ್ಥರು ಸ್ಮಶಾನದಲ್ಲಿ ಶವಕ್ಕೆ ಪೂಜೆ ಸಲ್ಲಿಸಿ ಬೆಂಕಿ ಹಚ್ಚುತ್ತಿದ್ದಂತೆ ಮರದಲ್ಲಿ ಗೂಡು ಕಟ್ಟಿದ್ದ ಹೆಜ್ಜೇನು ಗುಂಪು ದಾಳಿ ಮಾಡಿವೆ. ಇದನ್ನೂ ಓದಿ: ತುಂಗಾ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಈ ಪೈಕಿ ಚೆನ್ನಪ್ಪ ಅವರು ಹೆಜ್ಜೇನು ದಾಳಿಗೆ ತೀವ್ರವಾಗಿ ಅಸ್ವಸ್ಥಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆಯೇ ಅಸುನೀಗಿದ್ದಾರೆ. ಉಳಿದ 10 ಮಂದಿ ಹೋಲಿ ಕ್ರಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇವರ ಪೈಕಿ ಒಬ್ಬರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಚೈತ್ರಾ ಕುಂದಾಪುರ ಮೇಲೆ ಮತ್ತೊಂದು FIR – ಸನಾತನ ಧರ್ಮ ಬಟ್ಟೆ ಮಳಿಗೆ ಪ್ರಕರಣದಲ್ಲೂ ವಂಚನೆ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್