ಮೈ-ಬೆಂ. ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ- ಚಾಲಕ ಸಾವು

Public TV
1 Min Read

ಮಂಡ್ಯ: ಮೈಸೂರು-ಬೆಂಗಳೂರು (Bengaluru-Mysuru) ಹೆದ್ದಾರಿಯಲ್ಲಿ ಕಾರುಗಳು ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲೇ ಮೃತಪಟ್ಟಿರುವ ಘಟನೆ ಶ್ರೀರಂಗಪಟ್ಟಣ (ShriRangapatna) ತಾಲೂಕಿನ ಟಿ.ಎಂ.ಹೊಸೂರು ಗ್ರಾಮದ ಬಳಿ ನಡೆದಿದೆ.

ಮೈಸೂರು ಕಡೆಗೆ ಸ್ವಿಫ್ಟ್ ಕಾರು, ಬೆಂಗಳೂರಿನತ್ತ ವರ್ನಾ ಕಾರು ಹೊರಟಿತ್ತು. ಈ ವೇಳೆ ವರ್ನಾ ಕಾರು ಡಿವೈಡರ್ ಹಾರಿ ಬಂದು ಮೈಸೂರಿನ ಕಡೆ ಹೋಗುತ್ತಿದ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ಹೆತ್ತ ಮಗುವನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ

ಕಾರು ಡಿಕ್ಕಿಯಾದ ರಭಸಕ್ಕೆ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಯಾಳುಗಳನ್ನು ಮೈಸೂರು ಖಾಸಗಿ ಆಸ್ವತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಮಾಜಿ ಸಚಿವ ಗೋಪಾಲಯ್ಯಗೆ ಕೊಲೆ ಬೆದರಿಕೆ – ಮಾಜಿ ಕಾರ್ಪೊರೇಟರ್ ಪದ್ಮರಾಜ್ ವಿರುದ್ಧ ಎಫ್‌ಐಆರ್

Share This Article