ಮಗಳ ಆಪರೇಷನ್‍ಗೆಂದು ಆಸ್ಪತ್ರೆಗೆ ಬಂದಿದ್ದ ತಂದೆಗೆ ಸೆಕ್ಯೂರಿಟಿ ಗಾರ್ಡ್ ನಿಂದ ಹಲ್ಲೆ

Public TV
1 Min Read

ಬೀದರ್: ಮಗಳನ್ನು ಕರೆದುಕೊಂಡು ಚಿಕಿತ್ಸೆಗೆ ಬಂದಿದ್ದ ತಂದೆಯ ಮೇಲೆ ಸೆಕ್ಯೂರಿಟಿ ಗಾರ್ಡ್ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಅವಮಾನವಿಯ ಘಟನೆ ನಡೆದಿದೆ.

ಬಸವರಾಜ್ ಬಿರಾದರ್ ಹಲ್ಲೆಗೊಳ್ಳಗಾದ ವ್ಯಕ್ತಿ. ಬೀದರ್ ಜಿಲ್ಲಾ ಆಸ್ಪತ್ರೆಗೆ ತಮ್ಮ ಮಗಳ ಕಾಲು ಆಪರೇಷನ್‍ಗೆಂದು ಕರೆದುಕೊಂಡು ಹೋಗಿದ್ದರು. ಅಲ್ಲಿ ಬಸವರಾಜ್ ಸುಮ್ಮನೆ ಆಸ್ಪತ್ರೆಯ ಹೊರಗೆ ಒಳಗೆ ಪದೇ ಪದೇ ಓಡಾಟ ನಡೆಸಿದ್ದಾರೆ.

ಈ ವೇಳೆಯಲ್ಲಿ ಬಾಲಕಿಯ ತಂದೆಯನ್ನು ಸೆಕ್ಯೂರಿಟಿ ಗಾರ್ಡ್ ಪ್ರಶ್ನಿಸಿದ್ದಾನೆ. ನಂತರ ಇವರ ನಡುವೆ ಮಾತಿನ ಚಕಮಕಿ ನಡೆದು ಗಲಾಟೆಗೆ ತಿರುಗಿದೆ. ಪರಿಣಾಮ ಬಾಲಕಿಯ ತಂದೆಯ ಮೇಲೆ ಸೆಕ್ಯೂರಿಟಿ ಗಾರ್ಡ್ ಹಲ್ಲೆ ನಡೆಸಿದ್ದರಿಂದ ಬಸವರಾಜ್ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ.

ಈ ಘಟನೆ ಬಳಿಕ ಸೆಕ್ಯುರಿಟಿ ಗಾರ್ಡ್ ಅನೀಲ್, ಬಸವರಾಜ್ ಮೇಲೆ ಹಲ್ಲೆ ನಡೆಸಿ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ಸದ್ಯ ಹಲ್ಲೆಗೊಳಗಾದ ಬಸವರಾಜ್ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *