– `ನಾನು ಭ್ರಷ್ಟಾಚಾರದ ಬಗ್ಗೆ ಸತ್ಯವನ್ನೇ ಹೇಳಿದ್ದೇನೆಂದ ʻಕೈʼ ಶಾಸಕ
– `ಆಡಿಯೋ’ ನನ್ನದೇ ಎಂದು ಒಪ್ಪಿಕೊಂಡ ಬಿ.ಆರ್ ಪಾಟೀಲ್
ಬೆಂಗಳೂರು/ಕಲಬುರಗಿ: ರಾಜ್ಯ ಸರ್ಕಾರದ ವಿರುದ್ಧ ಸ್ಷಪಕ್ಷೀಯ ಶಾಸಕ ಬಿ.ಆರ್ ಪಾಟೀಲ್ (BR Patil) ಭ್ರಷ್ಟಾಚಾರದ ಬಾಂಬ್ ಸಿಡಿಸಿದ್ದಾರೆ. ಬಿ.ಆರ್ ಪಾಟೀಲ್ ಆಡಿಯೋ ರಾಜ್ಯ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಈ ಆಡಿಯೋ ಸರ್ಕಾರಕ್ಕೆ ಮುಜುಗರ.. ಕಸಿವಿಸಿ ಉಂಟು ಮಾಡಿದ್ರೇ.. ವಿಪಕ್ಷ ಬಿಜೆಪಿ (BJP) ಪಡೆಗೆ ಮತ್ತೊಂದು ಅಸ್ತ್ರ ಸಿಕ್ಕಂತಾಗಿದೆ.
ಅಲ್ಲದೇ ಎಐಸಿಸಿ (AICC) ಅಂಗಳಕ್ಕೂ ಈ ಆಡಿಯೋ ತಲುಪಿದ್ದು, ʻಪಬ್ಲಿಕ್ ಟಿವಿʼ ಬ್ರೇಕ್ ಮಾಡಿದ ಸ್ಫೋಟಕ ವರದಿಯನ್ನ ಆಳಂದ ಶಾಸಕ ಬಿ.ಆರ್ ಪಾಟೀಲ್ ಖುದ್ದು ಒಪ್ಪಿಕೊಂಡಿದ್ದಾರೆ. ಇದನ್ನೂ ಓದಿ: ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಶೇ.15 ಮೀಸಲಾತಿ – ಕೇಂದ್ರದ ಮಾದರಿ ಅನುಸರಿಸಿದ್ದೇವೆ: ಜಮೀರ್
ಹೌದು.. ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಬಾಂಬ್ (Corruption Bomb) ಸ್ಫೋಟಿಸಿದ್ದ ಆಡಿಯೋ ನನ್ನದೇ.. ಆಡಿಯೋದಲ್ಲಿ ಮಾತಾಡಿರೋದು ನಾನೇ ಎಂದು ಶಾಸಕ ಬಿ.ಆರ್ ಪಾಟೀಲ್ ಒಪ್ಪಿಕೊಂಡಿದ್ದಾರೆ. ಆಡಿಯೋದಲ್ಲಿ ನಾನು ಸತ್ಯವನ್ನೇ ಹೇಳಿದ್ದೇನೆ. ಈ ವಿಚಾರವಾಗಿ ಸಿಎಂ ನನ್ನನ್ನು ಕರೆದಿಲ್ಲ. ಸಿಎಂ ಸಿದ್ದರಾಮಯ್ಯ ಕರೆದರೆ ಹೋಗಿ ಮಾತಾಡುತ್ತೇನೆ. ಹೈಕಮಾಂಡ್ಗೆ ಯಾಕೆ ನಾನು ಹೇಳಲಿ? ಈ ರೀತಿ ವಸತಿ ಇಲಾಖೆಯಲ್ಲಿ ನಡೆದಿಲ್ಲವಾದರೆ ಸಚಿವ ಜಮೀರ್ ತನಿಖೆ ಮಾಡಿಸಲಿ. ಎಲ್ಲ ಸರ್ಕಾರದಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಬಿಜೆಪಿಯವರೇನು ಸಾಚಾಗಳಲ್ಲ. ಅವರ ಕಾಲದಲ್ಲೂ ಇದೆಲ್ಲ ಆಗಿದೆ ಎಂದಿದ್ದಾರೆ.
`ಮನಿ’ ಕೊಟ್ಟರೆ `ಮನೆ’
ವಸತಿ ಯೋಜನೆಯಡಿ ಮನೆ ಪಡೆಯಲು ದುಡ್ಡು ಕೊಟ್ಟರಷ್ಟೇ ಮನೆ ಕೊಡಲಾಗ್ತಿದೆ ಎಂಬ ಆಡಿಯೋ ವಿಚಾರಕ್ಕೆ ಕಾಂಗ್ರೆಸ್ ನಾಯಕರು ರಿಯಾಕ್ಟ್ ಮಾಡಿದ್ದಾರೆ. ಅಲ್ಲದೇ ನಾನು ಹೇಳಿರೋದು ಸತ್ಯ ಎಂದು ಬಿ.ಆರ್ ಪಾಟೀಲ್ ಹೇಳಿದ್ದನ್ನು ಖಂಡಿಸ್ತೇನೆ ಎಂದು ಡಿಸಿಎಂ ಡಿಕೆಶಿ ಹೇಳಿದ್ದಾರೆ. ಇದನ್ನೂ ಓದಿ: ಇಡೀ ದೇಶದಲ್ಲಿ ಭ್ರಷ್ಟಾಚಾರ ಇದೆ, ಇಲ್ಲ ಅಂತ ಹೇಳಲು ಸಾಧ್ಯವೇ ಇಲ್ಲ: ದಿನೇಶ್ ಗುಂಡೂರಾವ್
ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಇದನ್ನು ಸಿಎಂ ಗಮನಕ್ಕೆ ತಂದಿದ್ದೇವೆ. ಅವರು ಏನು ಕ್ರಮ ತೆಗೆದುಕೊಳ್ಳಬೇಕೋ ಅದನ್ನ ತೆಗೆದುಕೊಳ್ಳುತ್ತಾರೆ ಎಂದಿದ್ದಾರೆ. ಮೈಸೂರಿನಲ್ಲಿ ಮಾತಾಡಿದ ಸಚಿವ ಮಹದೇವಪ್ಪ. ನಾನು ಕೂಡ ಆಡಿಯೋ ಕೇಳಿಸಿಕೊಂಡಿದ್ದೇನೆ. ಅಕ್ರಮ ಆಗಿದ್ದರೆ ಕಾನೂನು ರೀತಿಯಲ್ಲಿ ಕ್ರಮ ಆಗುತ್ತದೆ ಎಂದರೆ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆಗೆ ನಿರಾಕರಿಸಿದ್ದಾರೆ. ಅಲ್ಲದೇ ಪಾಟೀಲ್ ಹೇಳಿಕೆ ಸರ್ಕಾರಕ್ಕೆ ಮುಜುಗರ ತಂದಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸಿಎಂ, ಜಮೀರ್ ರಾಜೀನಾಮೆಗೆ ಬಿಜೆಪಿ ಆಗ್ರಹ
ಇನ್ನೂ ಶಾಸಕ ಬಿ.ಆರ್ ಪಾಟೀಲ್ ಆಡಿಯೋ ಬಾಂಬ್ ವಿಪಕ್ಷಕ್ಕೆ ಅಸ್ತ್ರವಾಗಿದ್ದು. ಸರ್ಕಾರದ ವಿರುದ್ಧ ಮುಗಿಬಿದ್ದಿದೆ. ಸಿದ್ದರಾಮಯ್ಯ ಒಂದು ತಪ್ಪನ್ನು ಮುಚ್ಚಿಕೊಳ್ಳಲು, ನೂರಾರು ತಪ್ಪುಗಳನ್ನು ಮಾಡುತ್ತಿದ್ದಾರೆ. ಮೊದಲು ಜಮೀರ್ ಕಚೇರಿಯಲ್ಲಿ ಕೂರಲಿ. ಯಾರಾದರೂ ಕೋರ್ಟ್ಗೆ ಹೋದರೆ ಛೀಮಾರಿ ಹಾಕುತ್ತೆ ಎಂದು ಹಾಸನದಲ್ಲಿ ಕೇಂದ್ರ ಸಚಿವ ಸೋಮಣ್ಣ ಗುಡುಗಿದ್ದಾರೆ. ಇದನ್ನೂ ಓದಿ: ಕೇಂದ್ರದಿಂದ ಯೂಟರ್ನ್ – ಅಮೆರಿಕ ಭೇಟಿಗೆ ಅವಕಾಶ ಸಿಕ್ಕಿದ ಬೆನ್ನಲ್ಲೇ MEA ವಿರುದ್ಧ ಪ್ರಿಯಾಂಕ್ ಖರ್ಗೆ ಕೆಂಡಾಮಂಡಲ
ಭ್ರಷ್ಟಾಚಾರದ ಮೊಟ್ಟೆ ಇಟ್ಟು ಮರಿ ಬೆಳೆಸಿದ್ದು ಕಾಂಗ್ರೆಸ್
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ, ಭ್ರಷ್ಟಾಚಾರದ ಮೊಟ್ಟೆ ಇಟ್ಟು ಮರಿಗಳನ್ನ ಬೆಳೆಸಿದವರು ಕಾಂಗ್ರೆಸ್ಸನವರು ಎಂದು ತಿವಿದಿದ್ದಾರೆ. ಈಗ ನಾವೇನಾದ್ರೂ ಹೇಳಿದ್ರೆ ಬಿಜೆಪಿಗರಿಗೆ ಕೆಲಸ ಇಲ್ಲ ಅಂತಾರೆ. ಈಗ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ಕೊಡಲಿ ನೋಡೋಣ ಎಂದಿದ್ದಾರೆ.
ವಸತಿ ಸಚಿವ ಜಮೀರ್ ರಾಜೀನಾಮೆಗೆ ಈಶ್ವರಪ್ಪ ಆಗ್ರಹಿಸಿದ್ರೆ, ಸಿದ್ದರಾಮಯ್ಯ ಆಡಳಿತದಲ್ಲಿ ಹಿಡಿತ ಕಳೆದುಕೊಂಡಿದ್ದಾರೆ. ಆದಷ್ಟು ಬೇಗ ರಾಜೀನಾಮೆ ಕೊಟ್ಟು ಹೋಗುವುದು ಒಳ್ಳೇಯದು ಎಂದು ಬೆಳಗಾವಿಯಲ್ಲಿ ಸಂಸದ ಜಗದೀಶ್ ಶೆಟ್ಟರ್ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಮನೆಯೊಂದು ಮೂರು ಬಾಗಿಲು – ಶಾ ರಾಜ್ಯ ಭೇಟಿ ಸಂದರ್ಭದಲ್ಲೇ ಬಿಜೆಪಿ ಭಿನ್ನಮತ ತಾರಕಕ್ಕೆ!