ಗೋ ಬ್ಯಾಕ್ ಅಭಿಯಾನ – ನನ್ನನ್ನು ಸುಳ್ಳುಗಾರ ಅಂತಾ ಕರೆಯೋದು ಎಷ್ಟು ಸರಿ?: ಸೋಮಣ್ಣ ಭಾವುಕ

Public TV
1 Min Read

ಚಾಮರಾಜನಗರ: ನಗರದಲ್ಲಿ ನಡೆಸಲಾದ ಗೋ ಬ್ಯಾಕ್ ಸೋಮಣ್ಣ ಅಭಿಯಾನದ ಹಿಂದೆ ರಾಜಕೀಯ ಪಿತೂರಿ ಇದೆ. ನನ್ನನ್ನು ಸುಳ್ಳುಗಾರ ಎಂದು ಕರೆಯುವುದು ಎಷ್ಟು ಸರಿ? ಬೆಂಗಳೂರಿನಿಂದ ಫ್ಲೆಕ್ಸ್ ಬೋರ್ಡ್ ತಂದು ಹಾಕಿ ತೇಜೋವಧೆ ಮಾಡಿದ್ದು ಎಷ್ಟರ ಮಟ್ಟಿಗೆ ಸರಿ? ಎಂದು ಸಚಿವ ವಿ ಸೋಮಣ್ಣ (V Somanna) ಭಾವುಕರಾಗಿ ಪ್ರಶ್ನಿಸಿದ್ದಾರೆ.

ಮುರಿದ ರಥ ಹಾಗೂ ದೇವಸ್ಥಾನ ಜೀರ್ಣೋದ್ಧಾರ ಮಾಡಿಕೊಡುವುದಾಗಿ ಭರವಸೆ ನೀಡಿದ್ದ ಸೋಮಣ್ಣ ಕೊಟ್ಟ ಮಾತಿಗೆ ತಪ್ಪಿದ್ದಾರೆಂದು ಗೋಬ್ಯಾಕ್ ಸೋಮಣ್ಣ ಅಭಿಯಾನ ಆರಂಭಿಸಿದ್ದ ಚಾಮರಾಜನಗರ (Chamarajanagar) ತಾಲೂಕಿನ ಚನ್ನಪ್ಪನಪುರ ಅಮಚವಾಡಿ ಮತ್ತಿತರ ಗ್ರಾಮಸ್ಥರೊಂದಿಗೆ ಸೋಮಣ್ಣ ಸಭೆ ನಡೆಸಿದರು.

ಈ ಅಭಿಯಾನದ ಹಿಂದೆ ರಾಜಕೀಯ ಪಿತೂರಿ ಇರುವ ಬಗ್ಗೆ ಪರೋಕ್ಷವಾಗಿ ಪ್ರಸ್ತಾಪಿಸಿದ ಸೋಮಣ್ಣ ನಾನೇನು ತಪ್ಪು ಮಾಡಿದ್ದೇನೆ? ನನ್ನನ್ನು ಖಳನಾಯಕನನ್ನಾಗಿ ಮಾಡಿದ್ದೀರಿ. ಯಾರೋ ಸೃಷ್ಟಿ ಮಾಡಿ ಕಳಿಸುತ್ತಾರೆ. ಯಾರದ್ದೋ ಮಾತು ಕೇಳಿ ಕೆಟ್ಟದಾಗಿ ನಡೆದುಕೊಂಡರೆ ಹೇಗೆ? ಇನ್ನೊಬ್ಬರ ಮುಲಾಜಿಗೋಸ್ಕರ, ಇನ್ನೊಬ್ಬರನ್ನು ತೃಪ್ತಿಪಡಿಸಲು ನನ್ನನ್ನು ಕೆಟ್ಟದಾಗಿ ಬಿಂಬಿಸಿ ಹರಾಜು ಹಾಕಿದ್ದೀರಿ ಎಂದು ತೀವ್ರ ಅಸಮಾಧಾನ ಹೊರಹಾಕಿದರು. ಇದನ್ನೂ ಓದಿ: ಮುಸ್ಲಿಮರು 3 ಕಡೆ ಲಾಭ ಪಡೆಯುತ್ತಿದ್ದಾರೆ; ಮೀಸಲಾತಿ ಇವರಪ್ಪನ ಮನೆಯದ್ದಾ – ಯತ್ನಾಳ್‌ ಪ್ರಶ್ನೆ

ದೇವರ ಹತ್ರ ಪಾಲಿಟಿಕ್ಸ್, ಚಿಲ್ಲರೆ ಕೆಲಸ ಮಾಡಬಾರದು, ಕಳೆದು ಹೋಗ್ತೀರಿ ಎಂದಂತಹ ಅವರು ತಮ್ಮ ರಾಜಕೀಯ ವಿರೋಧಿಗಳಿಗೆ ಎಚ್ಚರಿಕೆ ನೀಡಿದರು. ದೇವಸ್ಥಾನ ಸ್ವಚ್ಛವಾಗಿ ಇಟ್ಟುಕೊಳ್ಳಿ ಎನ್ನುವುದೇ ತಪ್ಪಾ? ತಪ್ಪಾಗಿದ್ದರೆ ಕ್ಷಮಿಸಿ. ನನ್ನ ತೇಜೋವಧೆ ಮಾಡಿದ್ದಕ್ಕೆ ದೇವಸ್ಥಾನ ಹೇಗೆ ಅಭಿವೃದ್ಧಿ ಮಾಡುತ್ತೇನೆ ನೋಡ್ತಾ ಇರಿ. ರಥ ನಿರ್ಮಾಣ ಹಾಗೂ ದೇವಸ್ಥಾನ ಅಭಿವೃದ್ಧಿಗೆ ಕ್ರಮ ವಹಿಸುತ್ತೇನೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಮೈಸೂರಿನ ಸಮಾರಂಭದಲ್ಲಿ ಪಾಲ್ಗೊಳ್ಳಲು ಹೊರಟಾಗ ದೊಡ್ಡಗೌಡ್ರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಪತ್ನಿ

Share This Article
309 Comments

Leave a Reply

Your email address will not be published. Required fields are marked *