ರೈತ, ಸರ್ಕಾರ, ಮಾಧ್ಯಮಗಳ ನಡುವಿನ ಸೌಹಾರ್ದ ಮಾತುಕತೆ ನಿಂತು ಹೋಗಿದೆ: ಎಚ್.ಆರ್ ರಂಗನಾಥ್ ಬೇಸರ

Public TV
3 Min Read

ಮೈಸೂರು: ದೇಶ ಅಭಿವೃದ್ಧಿಯಲ್ಲಿ ಬಹುಮುಖ್ಯ ಪಾತ್ರ ವಹಿಸುವ ಕೃಷಿ ವಿಚಾರದ ಬಗ್ಗೆ ರೈತರು, ಸರ್ಕಾರ ಹಾಗೂ ಮಾಧ್ಯಮಗಳು ನಡೆಸುವ ಸೌಹಾರ್ದ ಮಾತುಕತೆ ನಿಂತು ಹೋಗಿದೆ ಎಂದು ಪಬ್ಲಿಕ್ ಟಿವಿಯ ಮುಖ್ಯಸ್ಥ ಎಚ್.ಆರ್. ರಂಗನಾಥ್ ಬೇಸರ ವ್ಯಕ್ತಪಡಿಸಿದರು.

ರಾಜ್ಯ ಮಟ್ಟದ ರೈತ ಸಮಾವೇಶದಲ್ಲಿ ಮಾತನಾಡಿದ ಅವರು, ಸೌಹಾರ್ದ ಮಾತುಕತೆ ನಿಂತು ರೈತ ಸಮಸ್ಯೆಗಳಿಗೆ ಸ್ಪಷ್ಟ ಉತ್ತರ ಸಿಗುತ್ತಿಲ್ಲ. ಸಮಗ್ರ ರೈತ ಚಳವಳಿ ಕಲ್ಪನೆ ಎಲ್ಲಿ ಹೋಯಿತು ಎಂದು ಪ್ರಶ್ನಿಸಿದ ಅವರು, ರೈತ ಈ ದೇಶದಲ್ಲಿ ಮತ ಅಲ್ಲ. ಸಮರ್ಥ ರೈತ ಹೋರಾಟ ಮತ್ತೆ ಶುರುವಾಗಬೇಕು. ರೈತ ಸಂಘಟನೆ ಹೇಳುತ್ತವೆ ಎಂದರೆ ಸರ್ಕಾರ ಆ ಮಾತು ಕೇಳಬೇಕು. ಹಿಂದಿನ ಚಳವಳಿಯ ಶಕ್ತಿ ರೈತ ಹೋರಾಟಕ್ಕೆ ಬರಬೇಕಿದೆ ಎಂದು ಹೇಳಿದರು.

ಸರ್ಕಾರ ನೂತನ ಕಾನೂನುಗಳನ್ನು ತರುವಾಗ ರೈತರನ್ನು ಕೂರಿಸಿಕೊಂಡು ಚರ್ಚೆ ನಡೆಸಬೇಕು. ಈ ರೀತಿಯ ಸೌಜನ್ಯವನ್ನು ಸರ್ಕಾರ ಇಂದು ಕಳೆದುಕೊಂಡಿದೆ. ಇದರಿಂದಾಗಿ ಕೆಲವೊಮ್ಮೆ ಸರ್ಕಾರ ರೈತರಿಗೆ ಒಳ್ಳೆಯದಾಗುವ ಕಾನೂನನ್ನು ತಂದರೂ ಅದನ್ನು ಒಪ್ಪಿಕೊಳ್ಳದಂತ ಪರಿಸ್ಥಿತಿ ರೈತರಲಿಲ್ಲದ ಪರಿಸ್ಥಿತಿ ಬಂದಿದೆ ಎಂದು ಹೇಳಿದರು.

ಕಬ್ಬು ಬೆಳೆಯುವುದು ಸುಲಭ ಎನ್ನುತ್ತಾರೆ. ಆದರೆ ರೈತನಿಗೆ ಅದರ ಕಷ್ಟ ಗೊತ್ತಿದೆ. ಕಬ್ಬಿಗೆ ಸರ್ಕಾರಗಳು ನಿಗದಿ ಪಡಿಸುವ ಬೆಲೆ ಬೇರೆ ಆಗಿರುತ್ತದೆ. ಕಾರ್ಖಾನೆಗಳು ನಿಗದಿಗೊಳಿಸುವ ಬೆಲೆಯೇ ಬೇರೆಯಾಗಿದೆ. ಇದರಿಂದಾಗಿ ರೈತ ತೊಂದರೆಗೀಡಾಗುತ್ತಾನೆ ಎಂದು ನುಡಿದರು.

ಇತ್ತೀಚಿನ ದಿನಗಳಲ್ಲಿ ಯಾರು ರೈತರು, ಯಾರು ರೈತರಲ್ಲ ಎನ್ನುವುದೇ ತಿಳಿಯದಂತ ಪರಿಸ್ಥಿತಿ ಇದೆ. ಕೃಷಿಕರಲ್ಲದವರೂ ಕೃಷಿಕರಂತೆಯೂ, ಕೃಷಿಕರು ಕೃಷಿಕರಲ್ಲದವರಂತೆ ನಟಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಕೃಷಿಯೇ ಆಧಾರವಾಗಿಸಿ ಸಂತೋಷದ ಜೀವನ ನಡೆಸಬಹುದು. ಆದರೆ ಏಕ ಧಾನ್ಯ ಪದ್ಧತಿಯಲ್ಲಿ ಸಿಲುಕಿಕೊಂಡಿರುವವರು, ಇದನ್ನೆ ನಾವು ಮಾಡಬೇಕು ಎಂದು ಹಠಕ್ಕೆ ಬಿದ್ದವರು ತೊಂದರೆಗೀಡಾಗುತ್ತಿದ್ದಾರೆ. ಕೃಷಿಕನಿಗೆ ಶ್ರಮದ ಜೊತೆಗೆ ಬುದ್ಧಿವಂತಿಕೆಯು ಇದ್ದರೆ ಸುಖಕರ ಜೀವನ ನಡೆಸಬಹುದು ಎಂದು ಸಲಹೆ ನೀಡಿದರು.

ಒಂದು ನೋಟಿಸ್ ಅಥವಾ ಬೆಳೆ ನಷ್ಟಕ್ಕೆ ಹೆದರಿ ಇಂದು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಸಾವಿರಾರು ರೂಪಾಯಿ ದೋಚಿಕೊಂಡು ವಿದೇಶಕ್ಕೆ ಓಡಿ ಹೋದವರೇ ರಾಜಾರೋಷವಾಗಿ ಬದುಕುತ್ತಿದ್ದಾರೆ. ಅಂತವರೇ ಬದುಕಿದ್ದಾಗ ನಾವು ಈ ಚಿಕ್ಕಪುಟ್ಟ ಸಮಸ್ಯೆಗೆ ಹೆದರಬಾರದು ಎಂದು ಧೈರ್ಯ ತುಂಬಿದರು. ಇದನ್ನೂ ಓದಿ: ರಸ್ತೆ, ರಸ್ತೆಯಲ್ಲಿ ಕುಣಿಯುವುದಕ್ಕೆ ಬ್ರೇಕ್ ಹಾಕಿ ಬಾರ್, ರೆಸ್ಟೋರೆಂಟ್ ನಿಯಮ ಸಡಿಲಿಸಿ: ಗೋವಿಂದರಾಜ್ ಹೆಗ್ಡೆ

ಜಾಗತಿಕ ತಾಪಮಾನದ ಏರಿಳಿತಗಳು ನಮ್ಮನ್ನು ಎಲ್ಲಿಗೆ ತೆಗದುಕೊಂಡು ಹೋಗುತ್ತಿದೆ ಎನ್ನುವುದಕ್ಕೆ ಈ ವರ್ಷ ಮಾದರಿಯಾಗಿದೆ. ವಿಚಿತ್ರವಾದ ಹವಾಮಾನ ಏರು ಪೇರಾಗುತ್ತಿದೆ. ಇದು ಬೆಳೆಗಳ ಮೇಲೂ, ನಮ್ಮ ಜೀವನದ ಮೇಲೂ ಪರಿಣಾಮ ಬೀರುತ್ತದೆ ಎಂದು ಬೇಸರಿಸಿದರು.

ಸಮಸ್ಯೆ ನಿವಾರಣೆಯಾಗುತ್ತಿಲ್ಲ:  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಎಲ್ಲಾ ರಾಜಕೀಯ ಪಕ್ಷಗಳು ರೈತನಿಗೆ ಸೇರಿದ್ದು. ಈ ಸತ್ಯ ರಾಜಕೀಯ ಪಕ್ಷಗಳಿಗೆ ಅರ್ಥವಾಗಬೇಕು. ಈ ಮನೋಭಾವ ಬಂದರೆ ರೈತರ ಕಲ್ಯಾಣ ಸಾಧ್ಯ. ಚಳವಳಿ, ರಾಜಕಾರಣದ ನಡುವೆ ಸಂಬಂಧ ಇರಬೇಕಿತ್ತು. ಆದರೆ ಈ ಸಂಬಂಧ ಇಲ್ಲದ ಕಾರಣ ರೈತರ ಕಲ್ಯಾಣ ಆಗುತ್ತಿಲ್ಲ. ಆಹಾರ ಉತ್ಪಾದನೆ ಹೆಚ್ಚಾದರೂ ರೈತನ ಸಮಸ್ಯೆ ನಿವಾರಣೆ ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಹಾಸ್ಟೆಲ್‍ನಲ್ಲಿರುವ ಬ್ಯಾಗ್ ತರುತ್ತೇನೆಂದು ಹೇಳಿ ಹೋದ ಯುವತಿ ನಾಪತ್ತೆ

ಮೈಷುಗರ್ ಬಗ್ಗೆ ಮಾತನಾಡಿ, ಮೈಷುಗರ್‌ನಲ್ಲಿ ಕಬ್ಬು ಅರೆಯುವ ವ್ಯವಸ್ಥೆ ಬೇಗ ಪುನಾರಂಭವಾಗುತ್ತದೆ. ಶ್ರೀರಾಮ ಸಕ್ಕರೆ ಕಾರ್ಖಾನೆ ಖಾಸಗಿ ಅವರು ತೆಗೆದು ಕೊಂಡಿದ್ದಾರೆ. ಇದಕ್ಕೆ ಕೆಲವು ತಾಂತ್ರಿಕ ಸಮಸ್ಯೆಗಳಿವೆ. ಅದನ್ನು ನಿವಾರಿಸಿ ಬೇಗ ಕಾರ್ಖಾನೆ ಆರಂಭಿಸುತ್ತೇವೆ ಎಂದು ಭರವಸೆ ನೀಡಿದರು.

ಗಂಭೀರವಾಗಿ ಪರಿಗಣಿಸಿ: ಕುರುಬೂರು ಶಾಂತಕುಮಾರ್ ಮಾತನಾಡಿ, ಆಹಾರ ಉತ್ಪಾದನೆ ಹೆಚ್ಚಾಗಿದ್ದರೂ ರೈತರ ಬಾಳು ಹಸನಾಗಿಲ್ಲ. ಸರಕಾರ ರೈತರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು. ಇದನ್ನೂ ಓದಿ: ಸೋಮವಾರ ಯಾದಗಿರಿಯಲ್ಲಿ ಚುನಾವಣೆ – ಪೊಲೀಸ್ ಇಲಾಖೆ ಸಜ್ಜು

ರೈತನದು ಅನಿಶ್ಚಿತತೆಯ ಬದುಕು. ರೈತನ ಬದುಕು ನಿಶ್ಚಿತತೆಗೆ ತರುವ ಕೆಲಸ ಆಗಬೇಕಿದೆ. ಕೃಷಿಯ ಉಪ ಚಟುವಟಿಕೆಗಳನ್ನು ರೂಪಿಸುವ ಕೆಲಸ ತುರ್ತಾಗಿ ಆಗಬೇಕಿದೆ. ಈ ನಿಟ್ಟಿನಲ್ಲಿ ನಮ್ಮ ಸರಕಾರ ಬದ್ಧತೆಯಿಂದ ಚಿಂತನೆ ನಡೆಸಿದೆ. ರೈತನ ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಖಾಸಗಿ ಮಾರುಕಟ್ಟೆ ಎಪಿಎಂಸಿ ಕಾಯ್ದೆಗಿಂತಾ ಮುಂಚೆಯೇ ಬಂದಿದೆ. ಅಂತಾರಾಷ್ಟ್ರೀಯ ಮಟ್ಟದ ಕಂಪನಿಗಳು ಖಾಸಗಿ ಮಾರುಕಟ್ಟೆ ಆರಂಭಿಸಿ ಬಹಳ ವರ್ಷ ಆಗಿದೆ. ಖಾಸಗಿ ಮಾರುಕಟ್ಟೆ ಈಗ ಬಂದಿದಲ್ಲ ಎಂದರು. ಇದನ್ನೂ ಓದಿ: ಹಿಂದೂ ಹಿಂದೂಗಳ ಮಧ್ಯೆ, ಭಾಷೆಗಳ ಮಧ್ಯೆ ಜಗಳ ಹಚ್ಚಲು ಷಡ್ಯಂತ್ರ: ರಾಜಾಸಿಂಗ್ ಠಾಕೂರ್

ಈ ಕಾರ್ಯಕ್ರಮದಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್‌ಗೆ ರೈತ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸುತ್ತೂರು ಶ್ರೀಗಳು, ಹಿರಿಯ ಪತ್ರಕರ್ತರಾದ ರವಿ ಹೆಗಡೆ ಭಾಗಿಯಾಗಿದ್ದರು.

Share This Article
Leave a Comment

Leave a Reply

Your email address will not be published. Required fields are marked *