ಧಾರವಾಡ ದುರಂತ – ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರ ಘೊಷಣೆ

Public TV
1 Min Read

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ಮಂಗಳವಾರ ನಗರದಲ್ಲಿ ನಡೆದ ಕಟ್ಟಡ ಕುಸಿತ ದುರಂತದಲ್ಲಿ ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರ ಧನವನ್ನು ನೀಡುವುದಾಗಿ ಬೆಳಗಾವಿ ಪ್ರಾದೇಶಿಕ ಆಯುಕ್ತರಾದ ತುಷಾರ ಗಿರಿನಾಥ ಘೋಷಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಟ್ಟಡ ಮಾಲೀಕರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಆರೋಪಿಗಳು ಎಷ್ಟೇ ಪ್ರಭಾವಿ ಆಗಿದ್ದರೂ ಬಿಡುವ ಪ್ರಶ್ನೆಯೇ ಇಲ್ಲ. ಎಷ್ಟೇ ಪ್ರಭಾವ ಇದ್ದರೂ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಕಟ್ಟಡ ಯಾರದ್ದು ಎನ್ನುವುದು ನಮಗೆ ಗೊತ್ತಿದೆ. ಅವರು ಏನೆಲ್ಲಾ ಮಾಡಿದ್ದಾರೆ ಎಂಬುದು ನನಗೆ ಗೊತ್ತು ಎಂದು ಎಂದು ತಿಳಿಸಿದರು.

ಪರಿಹಾರದ ಮೊತ್ತವನ್ನು ಹೊರತು ಪಡಿಸಿ, ರಕ್ಷಣಾ ಕಾರ್ಯಾಚರಣೆಗೆ ಬಳಸಿದ ವೆಚ್ಚದ ಹಣವನ್ನು ಕಟ್ಟಡದ ಮಾಲೀಕರಿಂದ ವಸೂಲಿ ಮಾಡಲಾಗುವುದು. ಪೊಲೀಸ್ ಇಲಾಖೆಯಿಂದ ಒಂದು ದೂರು, ಕಾರ್ಮಿಕ ಇಲಾಖೆಯಿಂದ ದೂರು ದಾಖಲಾಗಿದೆ. ಈ ಬಗ್ಗೆ ನ್ಯಾಯಾಂಗ ತನಿಖೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ನಮ್ಮ ಬಳಿ ಎಲ್ಲಾ ದಾಖಲೆ ಸಂಗ್ರಹ ಇದೆ. ದಾಖಲೆಯನ್ನು ಪರಿಶೀಲನೆ ಮಾಡಿದ ಬಳಿಕ ಮುಂದಿನ ಕ್ರಮಕ್ಕೆ ಆದೇಶ ಮಾಡಲಾಗುತ್ತದೆ ಎಂದು ಪ್ರಾದೇಶಿಕ ಆಯುಕ್ತರು ಹೇಳಿದರು.

https://www.youtube.com/watch?v=jP84MBog6ds

Share This Article
Leave a Comment

Leave a Reply

Your email address will not be published. Required fields are marked *