ಉಪಚುನಾವಣೆಯ ನಂತ್ರ ರಾಜ್ಯ ರಾಜಕೀಯ ಬದಲಾಗುತ್ತೆ: ಸಿದ್ದರಾಮಯ್ಯ

Public TV
1 Min Read

ಹುಬ್ಬಳ್ಳಿ: ಉಪಚುನಾವಣೆ ನಂತರ ರಾಜ್ಯ ರಾಜಕೀಯ ಬದಲಾವಣೆ ಆಗುತ್ತದೆ. ಬಿಜೆಪಿ 8 ಸ್ಥಾನಗಳಲ್ಲಿ ಗೆಲ್ಲದಿದ್ದರೆ ರಾಜೀನಾಮೆ ಕೊಡಲೇಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಈಗಾಗಲೇ 5 ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದ್ದೇನೆ. ಎಲ್ಲ ಕ್ಷೇತ್ರಗಳಲ್ಲಿ ಪ್ರಚಾರ ನಡೆಸುತ್ತೇನೆ. ಉಪಚುನಾವಣೆ ನಂತರ ರಾಜ್ಯ ರಾಜಕೀಯ ಬದಲಾವಣೆ ಆಗುತ್ತದೆ ಎಂದರು.

ಬಿಜೆಪಿ 8 ಸ್ಥಾನಗಳಲ್ಲಿ ಗೆಲ್ಲದಿದ್ದರೆ ರಾಜೀನಾಮೆ ಕೊಡಲೇಬೇಕು. 17 ಜನರಿಗೆ ರಾಜೀನಾಮೆ ಕೊಡಿಸಿ ಕುದುರೆ ವ್ಯಾಪಾರ ಮಾಡಿದ್ದಾರೆ ಜೆಡಿಎಸ್ ಬಿಜೆಪಿಗೆ ಬೆಂಬಲ ಕೊಡಲ್ಲ ನನಗೆ ನಂಬಿಕೆ ಇದೆ. ಅವರು ಬಿಜೆಪಿ ಬೆಂಬಲಿಸುವುದಿಲ್ಲ. ಬಿಎಸ್‍ವೈ ಡಿಸ್ಟರ್ಬ್ ಆಗಿದ್ದಾರೆ ಅದಕ್ಕೆ ಏನೇನೋ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಮಹಾರಾಷ್ಟ್ರದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ರಾತ್ರೋ ರಾತ್ರಿ ರಾಷ್ಟ್ರಪತಿ ಆಡಳಿತ ಹಿಂಪಡೆದಿದ್ದು, ಶಿವಸೇನೆ ಬಿಜೆಪಿಯಿಂದ ಈಗಾಗಲೇ ಹೊರಬಂದಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಪತನವಾದ್ರೆ ನಾನು ಸಿಎಂ ಆಗುವುದಾಗಿ ಎಲ್ಲಿಯೂ ಹೇಳಿಲ್ಲ. ಬಿಜೆಪಿ ಸರ್ಕಾರ ಪತನವಾದ್ರೆ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರೋ ಸಾಧ್ಯತೆಯಿದೆ. ಮಧ್ಯಂತರ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಸ್ಪಷ್ಟ ಬಹುಮತ ದೊರೆಯಲಿದೆ. ಮುಂದೆ ನಾನು ಸಿಎಂ ಆಗೋ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *