ನೇಹಾ ಹತ್ಯೆ ಕೇಸ್ – ಎಬಿವಿಪಿಯಿಂದ ಗೃಹಸಚಿವರ ಮನೆ ಮುತ್ತಿಗೆಗೆ ಯತ್ನ

Public TV
1 Min Read

ಬೆಂಗಳೂರು: ಹುಬ್ಬಳ್ಳಿಯ ನೇಹಾ ಹತ್ಯೆ ಪ್ರಕರಣ ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ABVP) ಇಂದು ಪ್ರತಿಭಟನೆಗೆ ಮುಂದಾಗಿದ್ದು, ಬೆಂಗಳೂರಿನಲ್ಲಿರುವ ಗೃಹಸಚಿವ ಜಿ.ಪರಮೇಶ್ವರ್ (G Parameshwar) ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಶನಿವಾರ ಬೆಳಗ್ಗೆ ಗೃಹ ಸಚಿವರ ಮನೆಗೆ ಮುತ್ತಿಗೆ ಹಾಕಲು ಎಬಿವಿಪಿ ಮುಂದಾಗಿದೆ. ನಾಳೆ (ಭಾನುವಾರ) ರಾಜ್ಯಾದ್ಯಂತ ಪ್ರತಿಭಟನೆಗೆ ಎಬಿವಿಪಿ ಕರೆ ಕೊಟ್ಟಿದೆ. ಬೆಂಗಳೂರಿನಲ್ಲೂ ಹತ್ಯೆ ಖಂಡಿಸಿ ಎಬಿವಿಪಿ ಹೋರಾಟ ನಡೆಸಲಿದೆ. ಇದನ್ನೂ ಓದಿ: ಮಂಡ್ಯದಲ್ಲಿಂದು ಕಾಂಗ್ರೆಸ್, ಬಿಜೆಪಿ-ಜೆಡಿಎಸ್ ಸಮಾವೇಶ

ಇನ್ನು ಈ ಪ್ರಕರಣವನ್ನು ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗೆ ವರ್ಗಾವಣೆ ಮಾಡುವಂತೆ ಒತ್ತಾಯಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಯಲಿದೆ. ಸದ್ಯ ಗೃಹಸಚಿವ ಪರಮೇಶ್ವರ್ ಅವರ ಮನೆ ಮುಂದೆ ಪ್ರತಿಭಟನೆ ನಡೆಸಿ ಮುತ್ತಿಗೆ ಹಾಕಲು ಯತ್ನಿಸಿದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ‘ಲೋಕ’ ಚುನಾವಣೆ; ಬೆಂಗಳೂರಲ್ಲಿ 1 ಸಾವಿರ ಬಾರ್ & ರೆಸ್ಟೋರೆಂಟ್‌ಗಳಿಗೆ ನೋಟಿಸ್

Share This Article