ಪಬ್ಲಿಕ್ ಟಿವಿಯಲ್ಲಿ ನೋವು ತೋಡಿಕೊಂಡ ಪದ್ಮಾವತಿಗೆ ಫುಡ್ ಕಿಟ್ ವಿತರಣೆ

Public TV
1 Min Read

ಹುಬ್ಬಳ್ಳಿ: ಪಬ್ಲಿಕ್ ಟಿವಿಯ ಮನೆಯೇ ಮಂತ್ರಾಲಯ ಕಾರ್ಯಕ್ರಮದಲ್ಲಿ ಶುಕ್ರವಾರ ಹುಬ್ಬಳ್ಳಿಯ ಪದ್ಮಾವತಿಯವರು ಕರೆ ಮಾಡಿ ತಮ್ಮ ಅಳಲನ್ನು ತೋಡಿಕೊಂಡಿದ್ದರು.

ಆಹಾರವಿಲ್ಲದೇ ಜೀವನ ನಡೆಸುವಂತಾಗಿದೆ ಎಂದು ಪಬ್ಲಿಕ್ ಟಿವಿಯ ಕಾರ್ಯಕ್ರಮದ ಮೂಲಕ ತಮ್ಮ ಕಷ್ಟವನ್ನು ಹೇಳಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಯುವ ಮುಖಂಡ ದೀಪಕ್ ನಾಯ್ಡು ಅವರು ಪದ್ಮಾವತಿಯವರಿಗೆ ಮನೆಗೆ ಆಹಾರ ಕಿಟ್ ವಿತರಣೆ ಮಾಡಿದ್ದಾರೆ.

ಹುಬ್ಬಳ್ಳಿಯ ಆನಂದನಗರದಲ್ಲಿರುವ ಪದ್ಮಾವತಿಯವರ ಸ್ವಗೃಹಕ್ಕೆ ಭೇಟಿ ನೀಡಿದ ದೀಪಕ್ ನಾಯ್ಡು ಅವರು, ಅಕ್ಕಿ, ರವಾ, ಅವಲಕ್ಕಿ, ಬೆಳೆ, ಎಣ್ಣೆ, ತೊಗರಿಬೆಳೆ, ಸಕ್ಕರೆ ಚಹಾಪುಡಿ ಇರುವ ಫುಡ್ ಕಿಟ್ ವಿತರಣೆ ಮಾಡಿದ್ದಾರೆ. ಈ ಮೂಲಕ ಮನೆಯ ಮಂತ್ರಾಲಯ ಕಾರ್ಯಕ್ರಮದಲ್ಲಿ ನೋವನ್ನು ತೋಡಿಕೊಂಡ ಮಹಿಳೆಯ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *