ದೇವರ ಹುಂಡಿಯಲ್ಲಿ ವಿದೇಶಿ ಕರೆನ್ಸಿ ಹಾಗೂ ನಿಷೇಧಿತ ನೋಟು ಪತ್ತೆ

Public TV
1 Min Read

ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಘಾಟಿ ಸುಬ್ರಹಣ್ಯ ಕ್ಷೇತ್ರದ ಹುಂಡಿ ಎಣಿಕೆ ಕಾರ್ಯ ಇಂದು ನಡೆದಿದ್ದು, 28,18,831 ರೂ. ಹಣ ಸಂಗ್ರಹವಾಗಿದೆ.

ಪ್ರತಿ ತಿಂಗಳು ದೇವಾಲಯದ ಹುಂಡಿ ಎಣಿಕೆ ಕಾರ್ಯ ನಡೆಯಲಿದ್ದು ಏಪ್ರಿಲ್ ತಿಂಗಳ ಹುಂಡಿ ಎಣಿಕೆ ಕಾರ್ಯ ಇಂದು ನಡೆಯಿತು. ಏಪ್ರಿಲ್ ತಿಂಗಳಲ್ಲಿ ಹೆಚ್ಚಿನ ರಜಾ ದಿನಗಳಿದ್ದ ಕಾರಣ ದೇವಾಲಯಕ್ಕೆ ಭಕ್ತರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಹೋಗಿದ್ದು, ಅತಿ ಹೆಚ್ಚಿನ ಹಣ ಸಂಗ್ರಹವಾಗಿದೆ.

ಹುಂಡಿಯಲ್ಲಿ ಬ್ಯಾನ್ ಆಗಿದ್ದ 500 ಮುಖಬೆಲೆಯ 23 ನೋಟುಗಳು ಹಾಗೂ ಅಮೇರಿಕ, ಮಲೇಷ್ಯಾ ಕರೆನ್ಸಿ ಪತ್ತೆಯಾಗಿವೆ. ಇದಲ್ಲದೆ 2 ಗ್ರಾಂ ಬಂಗಾರ ಹಾಗೂ 1 ಕೆಜಿ 250 ಗ್ರಾಂ ಬೆಳ್ಳಿ ಅಭರಣಗಳು ಸಹ ಸಂಗ್ರಹವಾಗಿವೆ. ಈ ಬಾರಿ ಹುಂಡಿ ಎಣಿಕೆ ಕಾರ್ಯದಲ್ಲಿ ಭಕ್ತರು ಸಹ ಭಾಗವಹಿಸಿದ್ದರು. ವಿಡಿಯೋ ಚಿತ್ರೀಕರಣದೊಂದಿಗೆ ಎಣಿಕೆ ಕಾರ್ಯ ನಡೆಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *