ಹುಣಸೂರು ಘರ್ಷಣೆ- ರಾತ್ರೋರಾತ್ರಿ ಹನುಮನ ಮೂರ್ತಿ ತೆರವು

Public TV
1 Min Read

ಮೈಸೂರು: ಹುಣಸೂರಿನಲ್ಲಿ ಘರ್ಷಣೆ ನಡೆದ ಹಿನ್ನೆಲೆಯಲ್ಲಿ ರಾತ್ರೋರಾತ್ರಿ ಹನುಮನ ಮೂರ್ತಿಯನ್ನ ತೆರವುಗೊಳಿಸಲಾಗಿದೆ.

ಮುನೇಶ್ವರ ಕಾವಲ್ ಮೈದಾನದಲ್ಲಿ ಇರಿಸಲಾಗಿದ್ದ ಹನುಮನ ಬೃಹತ್ ಮೂರ್ತಿಗಳನ್ನ ತೆರವು ಮಾಡಲಾಗಿದೆ. ಉಪವಿಭಾಗಾಧಿಕಾರಿ ನೇತೃತ್ವದಲ್ಲಿ ಟ್ರ್ಯಾಕ್ಟರ್ ಗಳ ಮೂಲಕ ರಾತ್ರೋರಾತ್ರಿ ತೆರವು ಕಾರ್ಯ ನಡೆದಿದೆ.

ಬ್ರಾಹ್ಮಣ ಬೀದಿಯಲ್ಲಿರುವ ರಂಗನಾಥ ದೇವಾಲಯಕ್ಕೆ ಹನುಮನ ಬೃಹತ್ ಮೂರ್ತಿಯನ್ನ ಸ್ಥಳಾಂತರ ಮಾಡಲಾಗಿದೆ. ಹನುಮ ಮೂರ್ತಿ ಮುಟ್ಟಿದ್ರೆ ಪರಿಸ್ಥಿತಿ ಸರಿ ಇರಲ್ಲ ಎಂಬ ಪ್ರತಾಪ್ ಸಿಂಹ ಎಚ್ಚರಿಕೆ ನಡುವೆಯೂ ಮೂರ್ತಿ ತೆರವುಗೊಳಿಸಲಾಗಿದೆ.

ಭಾನುವಾರ ಕಲ್ಲು ತೂರಾಟ ನಡೆದಿದ್ದ ಹುಣಸೂರು ಪಟ್ಟಣದಲ್ಲಿ ಇಂದು ಬಂದ್ ಗೆ ಕರೆ ನೀಡಲಾಗಿದೆ. ಬೆಳಗ್ಗೆಯಿಂದಲೇ ಹುಣಸೂರು ಪಟ್ಟಣ ಬಿಕೋ ಎನ್ನುತ್ತಿದ್ದು, ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ. ಸರ್ಕಾರಿ ಬಸ್‍ಗಳು ರಸ್ತೆಗೆ ಇಳಿದಿಲ್ಲ. ಮುಂಜಾಗ್ರತಾ ಕ್ರಮವಾಗಿ ಹುಣಸೂರಿನಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *