ಸುತ್ತೂರು ಶ್ರೀಗಳ ಆಶೀರ್ವಾದ ಪಡೆದ ಹುಣಸೂರು ನೂತನ ಶಾಸಕ

Public TV
1 Min Read

ಮೈಸೂರು: ಸುತ್ತೂರು ಮಠಕ್ಕೆ ಹುಣಸೂರು ನೂತನ ಕಾಂಗ್ರೆಸ್ ಶಾಸಕ ಹೆಚ್ ಪಿ ಮಂಜುನಾಥ್ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದರು.

ನಂಜನಗೂಡು ತಾಲೂಕಿನ ಸುತ್ತೂರು ಮಠಕ್ಕೆ ತೆರಳಿ ಸುತ್ತೂರು ಶ್ರೀಗಳಿಗೆ ಗೌರವ ಸಮರ್ಪಣೆ ಮಾಡಿದರು. ನಂತರ ಸುತ್ತೂರು ಶ್ರೀಗಳು ಶಾಸಕ ಮಂಜುನಾಥ್ ಅವರನ್ನು ಆತ್ಮೀಯವಾಗಿ ಗೌರವಿಸಿದರು. ಶ್ರೀಗಳ ಜೊತೆ ಶಾಸಕ ಎಚ್ ಪಿ ಮಂಜುನಾಥ್ ಕೆಲ ಕಾಲ ಚರ್ಚೆ ನಡೆಸಿದರು.

ಮೈತ್ರಿ ಸರ್ಕಾರವನ್ನು ಬೀಳಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಬಿಜೆಪಿಯ ವಿಶ್ವನಾಥ್ ಅವರನ್ನು ಹೆಚ್ ಪಿ ಮಂಜುನಾಥ್ ಸೋಲಿಸಿದ್ದರು. ಬಿಜೆಪಿ ಪರವಾಗಿ 52,998 ಮತಗಳು ಚಲಾವಣೆಯಾದರೆ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ 92,725 ಮತಗಳನ್ನು ಪಡೆದಿದ್ದರು. ಕಳೆದ ಬಾರಿ 8,575 ಮತಗಳ ಅಂತರದಿಂದ ಗೆದ್ದ ವಿಶ್ವನಾಥ್ ಈ ಬಾರಿ 39,727 ಮತಗಳ ಅಂತರದಿಂದ ಸೋತಿದ್ದರು.

Share This Article
Leave a Comment

Leave a Reply

Your email address will not be published. Required fields are marked *