ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ಪತಿ

Public TV
1 Min Read

ಯಾದಗಿರಿ: ಶಹಾಪೂರ ತಾಲೂಕಿನ ಹತ್ತಿಗೂಡುರ ಗ್ರಾಮದಲ್ಲಿ ಸತಿ-ಪತಿಯ ಜಗಳ ಕೊಲೆಯಲ್ಲಿ ಅಂತ್ಯಕಂಡಿದೆ. ಪತಿಯೊಬ್ಬ ಸಿಟ್ಟಿಗೆದ್ದು ಕೊಡಲಿಯಿಂದ ಕೊಚ್ಚಿ ತನ್ನ ಪತ್ನಿಯನ್ನೇ ಬರ್ಬರವಾಗಿ ಕೊಲೆಗೈದಿದ್ದಾನೆ.

ಹತ್ತಿಗೂಡುರ ಗ್ರಾಮದ ನಿವಾಸಿ ರೇಣುಕಾ(30) ಕೊಲೆಯಾದ ದುರ್ದೈವಿ. ರೇಣುಕಾಳನ್ನು ಪತಿ ಯಲ್ಲಪ್ಪ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾನೆ. ಪತಿ ಪತ್ನಿ ನಡುವೆ ಮಾತಿನಿಂದ ಆರಂಭವಾದ ಜಗಳ ಕೊಲೆಯಿಂದ ಅಂತ್ಯ ಕಂಡಿದೆ. ಕ್ಷುಲ್ಲಕ ಕಾರಣಕ್ಕೆ ಪತಿ, ಪತ್ನಿ ನಡುವೆ ಜಗಳ ಆರಂಭವಾಗಿದೆ. ಮಾತಿಗೆ ಮಾತು ಬೆಳೆದು ಜಗಳ ತಾರಕ್ಕಕ್ಕೇರಿ, ಕೋಪಗೊಂಡ ಪತಿ ಮನೆಯಲ್ಲಿದ್ದ ಕೊಡಲಿಯಿಂದ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿದ್ದಾನೆ.

ಕೊಲೆ ಮಾಡಿದ ಬಳಿಕ ತನ್ನ ತಪ್ಪಿನ ಅರಿವಾಗಿ ನೇರವಾಗಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ. ತನ್ನ ಪತ್ನಿಯನ್ನು ತಾನೇ ಕೊಲೆ ಮಾಡಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿ ತಪ್ಪು ಒಪ್ಪಿಕೊಂಡಿದ್ದಾನೆ.

ಸದ್ಯ ಈ ಸಂಬಂಧ ಪ್ರಕರಣ ದಾಖಲಿಕೊಂಡ ಶಹಾಪೂರ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಹಾಗೆಯೇ ಪ್ರಕರಣ ಸಂಬಂಧ ವಿಚಾರಣೆ ಆರಂಭಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *