ಕೌಟುಂಬಿಕ ಕಲಹ – ಪತ್ನಿಯ ತಲೆಗೆ ಕಬ್ಬಿಣದ ರಾಡ್‍ನಿಂದ ಹೊಡೆದು ಹತ್ಯೆಗೈದ ಪತಿ

Public TV
1 Min Read

ಮಂಡ್ಯ: ಕೌಟುಂಬಿಕ ಕಲಹದಿಂದ ಬೇಸತ್ತು ವ್ಯಕ್ತಿಯೊಬ್ಬ ಪತ್ನಿಯ (Wife) ಮೇಲೆ ಕಬ್ಬಿಣದ ರಾಡ್‍ನಿಂದ ಹಲ್ಲೆಗೈದು ಹತ್ಯೆ ಮಾಡಿದ ಘಟನೆ ಮಳವಳ್ಳಿಯ ದೇಶಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಮಧುಶ್ರೀ (32) ಹತ್ಯೆಗೀಡಾದ ಮಹಿಳೆ. ಆಕೆಯ ಪತಿ (Husband ) ಮಹದೇವ್ (38) ಕೊಲೆಗೈದ ಆರೋಪಿಯಾಗಿದ್ದಾನೆ. 10 ವರ್ಷಗಳ ಹಿಂದೆ ಮಧುಶ್ರೀ ಹಾಗೂ ಮಹದೇವ್ ಮದುವೆಯಾಗಿದ್ದರು. ಇತ್ತೀಚೆಗೆ ಇಬ್ಬರ ನಡುವೆ ಆಗಾಗ ಗಲಾಟೆಯಾಗುತ್ತಿತ್ತು. ಮಂಗಳವಾರ ರಾತ್ರಿ ಸಹ ಇಬ್ಬರು ಜಗಳವಾಡಿಕೊಂಡಿದ್ದು, ಈ ವೇಳೆ ಕಟ್ಟಿಗೆ ಹಾಗೂ ಕಬ್ಬಿಣದ ರಾಡ್‍ನಿಂದ ಮಹಾದೇವ್ ಮಹಿಳೆಯ ತಲೆಯ ಮೇಲೆ ಹಲ್ಲೆಗೈದಿದ್ದಾನೆ. ಪರಿಣಾಮ ತೀವ್ರ ರಕ್ತಸ್ರಾವದಿಂದ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಇದನ್ನೂ ಓದಿ: ಮಗಳ ಎದುರಲ್ಲೇ ಚಾಕು ಇರಿದು ತಾಯಿಯ ಹತ್ಯೆಗೈದ ದುಷ್ಕರ್ಮಿ

ಆರೋಪಿ ಚಾಲಕನಾಗಿ ಕೆಲಸ ಮಾಡುತ್ತಿದ್ದು, ದಂಪತಿಗೆ 6 ಹಾಗೂ 8 ವರ್ಷದ ಇಬ್ಬರೂ ಹೆಣ್ಣು ಮಕ್ಕಳಿದ್ದಾರೆ ಎಂದು ತಿಳಿದು ಬಂದಿದೆ.

ಕೊಲೆಯ ಬಳಿಕ ಮಹದೇವ್ ಕಿರುಗಾವಲು ಪೊಲೀಸ್ (Police) ಠಾಣೆಗೆ ತೆರಳಿ ಪತ್ನಿಯನ್ನು ಕೊಲೆಗೈದಿದ್ದಾಗಿ ತಿಳಿಸಿ ಶರಣಾಗಿದ್ದಾನೆ. ಈ ಸಂಬಂಧ ಕಿರುಗಾವಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಯತ್ನಾಳ್ ಆರೋಪದ ಬಗ್ಗೆ ಟೀಕೆ ಮಾಡಲ್ಲ, ಎಲ್ಲಾ ಸರಿಯಾಗತ್ತೆ: ಬಿಎಸ್‍ವೈ

Share This Article