ದೊಣ್ಣೆಯಿಂದ ಹೊಡೆದು ಪತ್ನಿಯ ಬರ್ಬರ ಕೊಲೆ

Public TV
1 Min Read

ಬೆಂಗಳೂರು: ಕುಡಿದ ಅಮಲಿನಲ್ಲಿ ಪತಿರಾಯನೆ ತನ್ನ ಪತ್ನಿಯನ್ನು ದೊಣ್ಣೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ನ ಸೀತನಾಯಕನಹಳ್ಳಿಯಲ್ಲಿ ನಡೆದಿದೆ.

ಕೊಲೆಯಾದ ಮಹಿಳೆಯನ್ನ ತಮಿಳುನಾಡು ಮೂಲದ ತಿರುಪತ್ತೂರು ನಿವಾಸಿ ವೆಳ್ಳಿ ಎಂದು ಗುರುತಿಸಲಾಗಿದೆ. ಈಕೆಯ ಪತಿ ರಾಜು ಹತ್ಯೆ ಮಾಡಿ ತಲೆ ಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜು ಮತ್ತು ವೆಳ್ಳಿ ದಂಪತಿ ಕಳೆದ ಮೂರು ನಾಲ್ಕು ವರ್ಷಗಳಿಂದ ಗಾರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಆದರೆ ಪ್ರತಿ ದಿನ ಆರೋಪಿ ರಾಜು ಕುಡಿದು ಬರುತ್ತಿದ್ದನು. ಇದರಿಂದ ಮನೆಯಲ್ಲಿ ಸಣ್ಣಪುಟ್ಟ ವಿಚಾರಗಳಿಗೂ ಆಗಾಗ ಇಬ್ಬರ ನಡುವೆ ಗಲಾಟೆ ನಡೆಯುತ್ತಿತ್ತು ಎಂದು ಗಾರೆ ಮೇಸ್ತ್ರಿ ಹೇಳಿದ್ದಾರೆ.

ಸೋಮವಾರ ಕೂಡ ಕುಡಿದು ಬಂದು ಇಬ್ಬರ ನಡುವೆ ಗಲಾಟೆ ನಡೆದಿದೆ. ಆದರೆ ಜಗಳ ವಿಕೋಪಕ್ಕೆ ಹೋಗಿ ಆರೋಪಿ ರಾಜು ಕುಡಿದ ಮತ್ತಿನಲ್ಲಿ ದೊಣ್ಣೆಯಿಂದ ವೆಳ್ಳಿಗೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ.

ಈ ಬಗ್ಗೆ ಸಂಬಂಧಿಕರು ಪೊಲೀಸರಿಗೆ ಮಾಹಿತಿಯನ್ನು ತಿಳಿಸಿದ್ದು, ಜಿಗಣಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಪ್ರಕರಣವನ್ನು ದಾಖಲು ಮಾಡಿಕೊಂಡು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *