ಉಡುಪಿ | ಹೆಂಡತಿ ಹೆಚ್ಚು ಮೊಬೈಲ್ ಬಳಸ್ತಾಳೆ ಅಂತ ಕಡಿದು ಕೊಂದ ಪತಿ!

Public TV
1 Min Read

ಉಡುಪಿ: ಪತ್ನಿ (Wife) ಹೆಚ್ಚು ಸಮಯ ಮೊಬೈಲ್ (Mobile) ಬಳಸುತ್ತಾಳೆ ಎಂದು ಪತಿ (Husband) ಕತ್ತಿಯಿಂದ ಕಡಿದು ಹತ್ಯೆಗೈದ ಘಟನೆ ಬ್ರಹ್ಮಾವರ (Brahmavar) ತಾಲೂಕಿನ ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ನಡೆದಿದೆ.

ಹತ್ಯೆಯಾದ ಮಹಿಳೆಯನ್ನು ರೇಖಾ ಎಂದು ಗುರುತಿಸಲಾಗಿದೆ. ಕೊಲೆಗೈದ ಆರೋಪಿ ಗಣೇಶ್ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಹೆಂಡತಿ ಹೆಚ್ಚಿನ ಸಮಯ ಮೊಬೈಲ್ ಬಳಕೆ ಮಾಡುವ ವಿಚಾರಕ್ಕೆ, ಇಬ್ಬರ ನಡುವೆ ಗಲಾಟೆಯಾಗಿದೆ. ಈ ವೇಳೆ, ಆರೋಪಿ ಕತ್ತಿಯಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾನೆ. ಇನ್ನೂ ಆರೋಪಿ ವಿಪರೀತ ಮಧ್ಯ ವ್ಯಸನಿಯಾಗಿದ್ದ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಮಂಗಳೂರು | ಕಾರು ಅಪಘಾತದಲ್ಲಿ `ಕೈ’ ಮುಖಂಡ ಸೇರಿ ಇಬ್ಬರು ದುರ್ಮರಣ

ಈ ಸಂಬಂಧ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಉಡುಪಿ ಎಸ್‍ಪಿ ಹರಿರಾಮ್ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಹಿಳೆಯ ಮೃತದೇಹವನ್ನು ಬ್ರಹ್ಮಾವರ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಇದನ್ನೂ ಓದಿ: ಟ್ರ್ಯಾಕ್ಟರ್ ಕದ್ದು ಜೈಲು ಸೇರಿದ್ರು, ರಿಲೀಸ್ ಆಗಿ ಕಾರು ಕಳ್ಳತನಕ್ಕಿಳಿದ್ರು – ಮತ್ತೆ ಪೊಲೀಸರ ಅತಿಥಿಗಳಾದ ಕಳ್ರು!

Share This Article