ಮಕ್ಕಳಾಗದ್ದಕ್ಕೆ ಪತ್ನಿಗೆ ವಿಷ ಕೊಟ್ಟು ಹತ್ಯೆಗೈದ ಪೊಲೀಸ್!

Public TV
1 Min Read

ಯಾದಗಿರಿ: ಮಕ್ಕಳಾಗದ್ದಕ್ಕೆ ಪತ್ನಿಗೆ ಪೇದೆ ಪತಿ ವಿಷ ಕೊಟ್ಟು ಸಾಯಿಸಿದ ಅಮಾನವೀಯ ಘಟನೆ ಯಾದಗಿರಿಯ ಗ್ರಾಮೀಣ ಠಾಣೆಯ ಪೊಲೀಸ್ ವಸತಿ ಗೃಹದಲ್ಲಿ ನಡೆದಿದೆ.

ಈ ಘಟನೆ ಭಾನುವಾರ ನಡೆದಿದ್ದು, ಸೋಮವಾರ ಪತ್ನಿ ಹಣಮಂತಿ ಚಿಕಿತ್ಸೆ ಫಲಕಾರಿಯಾಗದೆ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ನಡೆದಿದ್ದೇನು?: ಯಾದಗಿರಿಯ ಕಿಲ್ಲನಕೇರಾ ಗ್ರಾಮದ ನಿವಾಸಿ ಹಾಗೂ ಯಾದಗಿರಿ ನಗರ ಠಾಣೆ ಪೊಲೀಸ್ ಪೇದೆಯಾದ ಮಹೇಂದ್ರ ಹಾಗೂ ರಾಯಚೂರನ ದೇವದುರ್ಗ ತಾಲೂಕಿನ ಕೊಪ್ಪರ ಗ್ರಾಮದ ನಿವಾಸಿ ಹಣಮಂತಿಗೆ 8 ವರ್ಷದ ಹಿಂದೆ ಮದುವೆಯಾಗಿತ್ತು. ಆದ್ರೆ ಈವರೆಗೂ ಮಕ್ಕಳಾಗಿರಲಿಲ್ಲ. ಹೀಗಾಗಿ ಪೇದೆ ಮಹೇಂದ್ರ ಪತ್ನಿ ಹಣಮಂತಿ ಜೊತೆ ಜಗಳವಾಡುತ್ತಿದ್ದನು. ಅಲ್ಲದೇ ಬೇರೆ ಮದುವೆಯಾಗುವುದಾಗಿ ಪ್ರಸ್ತಾಪ ಮಾಡಿದ್ದನು. ಈ ವಿಚಾರಕ್ಕೆ ಸಂಬಂಧಿಸಿದಂತೆ ಇವರಿಬ್ಬರ ಮಧ್ಯೆ ಜಗಳವಾಗುತ್ತಿತ್ತು. ಇದರಿಂದ ಸಿಟ್ಟುಗೊಂಡ ಪತಿ ಮಹೇಂದ್ರ ಪತ್ನಿಗೆ ವಿಷ ಕೊಟ್ಟಿದ್ದಾನೆ. ವಿಷ ಸೇವಿಸಿದ ಪರಿಣಾಮ ಹಣಮಂತಿ ನಗರದ ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಆಸ್ಪತ್ರೆಯಲ್ಲೇ ಮೃತಪಟ್ಟದ್ದಾರೆ.

ಪತ್ನಿ ಸಾವಿನ ಬಳಿಕ ಮಹೇಂದ್ರ ಪರಾರಿಯಾಗಿದ್ದಾನೆ. ಇದೀಗ ಹಣಮಂತಿ ಪೋಷಕರು ನಗರ ಠಾಣೆಯಲ್ಲಿ ಕೊಲೆಯ ಬಗ್ಗೆ ದೂರು ನೀಡಿದ್ದು, ಘಟನೆ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Share This Article
Leave a Comment

Leave a Reply

Your email address will not be published. Required fields are marked *