2ನೇ ಮದ್ವೆಗಾಗಿ ಪತ್ನಿ, ಇಬ್ಬರು ಮಕ್ಕಳನ್ನು ಕೊಂದವನಿಗೆ ಗಲ್ಲು ಶಿಕ್ಷೆ

Public TV
1 Min Read

ಗದಗ: 2ನೇ ಮದುವೆ ಮಾಡಿಕೊಳ್ಳಲು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದ ಪತಿಗೆ ಗಲ್ಲು ಶಿಕ್ಷೆ ವಿಧಿಸಿ ಗದಗದ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಜಿಲ್ಲೆಯ ಮುಂಡರಗಿ ತಾಲೂಕಿನ ಹಮ್ಮಗಿ ತಾಂಡ ನಿವಾಸಿ ಅರುಣ್ ಕುಮಾರ್ ಲಮಾಣಿಗೆ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ. 2ನೇ ಮದುವೆ ಮಾಡಿಕೊಳ್ಳಲು ತನ್ನ ಪತ್ನಿ ಮಂಜುಳಾ ಹಾಗೂ ಇಬ್ಬರು ಮಕ್ಕಳಿಗೆ ವಿಷ ಹಾಕಿ ಅರುಣ್ ಕೊಲೆ ಮಾಡಿದ್ದನು. 2016 ಮಾರ್ಚ್ 29ರಂದು ಹಮ್ಮಗಿ ಗ್ರಾಮದ ತೋಟದ ಮನೆಯಲ್ಲಿ ಅರುಣ್ ಪತ್ನಿ, ಮಕ್ಕಳಿಗೆ ವಿಷವಿಕ್ಕಿ ಹತ್ಯೆ ಮಾಡಿದ್ದನು. ಇದನ್ನೂ ಓದಿ: ಶೀಲ ಶಂಕಿಸಿ ಪತ್ನಿ ಸಹಿತ 5 ಮಂದಿಯ ಕೊಲೆ – ಪಾತಕಿಗೆ ಗಲ್ಲು ಶಿಕ್ಷೆ

ಈ ಪ್ರಕರಣವನ್ನು ನ್ಯಾಯಾಲಯ ಮೂರು ವರ್ಷಗಳಿಂದ ಸುದೀರ್ಘ ವಿಚಾರಣೆ ನಡೆಸಿದ್ದು, ಅರುಣ್ ಕೃತ್ಯ ಸಾಬೀತಾಗಿದೆ. ಈ ಹಿನ್ನೆಲೆ ನ್ಯಾಯಾಧೀಶರು ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ಹೊರಡಿಸಿದ್ದಾರೆ. ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯ ನ್ಯಾಯಾಧೀಶರಾದ ಜಿ.ಎಸ್ ಸಂಗ್ರೇಶಿ ಅವರು ಈ ಮಹತ್ವದ ತೀರ್ಪು ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *