ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ, ಅತೃಪ್ತ ಶಾಸಕರೊಂದಿಗೆ ದಿನಕ್ಕೆರಡು ಬಾರಿ ಮಾತನಾಡುತ್ತಿದ್ದೇನೆ: ಸಿದ್ದರಾಮಯ್ಯ

Public TV
1 Min Read

ಬಾಗಲಕೋಟೆ: ಅತೃಪ್ತ ಶಾಸಕರೊಂದಿಗೆ ಸ್ಪಂದಿಸಿಲ್ಲ ಅನ್ನೋದು ಊಹಾಪೋಹ ಎಲ್ಲಾ ಶಾಸಕರೊಂದಿಗೆ ದಿನಕ್ಕೆ ಎರಡರಿಂದ ಮೂರು ಸಾರಿ ಮಾತನಾಡ್ತಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸದ್ಯಕ್ಕೆ ಶಾಸಕರೆಲ್ಲಾ ಸಮಾಧಾನಗೊಂಡಿದ್ದು, ಯಾವುದೇ ರೀತಿಯ ಅಸಮಾಧಾನವಿಲ್ಲ. ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ಹೈಕಮಾಂಡ್ ಜೊತೆ ಫೋನ್ ನಲ್ಲಿ ಮಾತನಾಡಿದ್ದೇನೆ ಎಂದು ಬಾದಾಮಿ ತಾಲೂಕಿನ ನೀಲಗುಂದ ಗ್ರಾಮದಲ್ಲಿ ತಿಳಿಸಿದರು.

ಮಂತ್ರಿಗಳನ್ನ ಮಾಡಿರುವುದು ಎರಡು ವರ್ಷಕ್ಕೆ. ಮುಂದೆ ಅರ್ಹರಿಗೆ ಮಂತ್ರಿ ಸ್ಥಾನ ನೀಡುತ್ತೇವೆ. ಮತ್ತೊಂದು ಡಿಸಿಎಂ ಸ್ಥಾನ ಯಾವುದೇ ಕಾರಣಕ್ಕೂ ಸೃಷ್ಟಿಯಾಗಲ್ಲ ಎಂದು ಹೇಳಿದರು.

ಹೈಕಮಾಂಡ್ ನಿಂದ ನನಗೆ ಕರೆ ಬಂದಿಲ್ಲ ಅದೆಲ್ಲಾ ಸುಳ್ಳು. ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ರಾಹುಲ್ ಗಾಂಧಿ ನಿರ್ಧರಿಸುತ್ತಾರೆ. ನಾನು ಯಾರ ಹೆಸರನ್ನೂ ಶಿಫಾರಸ್ಸು ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Share This Article
Leave a Comment

Leave a Reply

Your email address will not be published. Required fields are marked *