ವಿಧಾನ ಪರಿಷತ್ ಟಿಕೆಟ್ ಆಕಾಂಕ್ಷಿ ನಾನಲ್ಲ: ಬಿವೈ ವಿಜಯೇಂದ್ರ

Public TV
1 Min Read

ಬೆಂಗಳೂರು: ವಿಧಾನ ಪರಿಷತ್ ಟಿಕೆಟ್ ಆಕಾಂಕ್ಷಿ ನಾನಲ್ಲ ಅಂತಹ ಯಾವುದೇ ಪ್ರಯತ್ನವನ್ನು ನಾನು ನಡೆಸಿಲ್ಲ ಎಂದು ಬಿಎಸ್‍ವೈ ಪುತ್ರ ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ.

ಪರಿಷತ್ ಸ್ಥಾನಕ್ಕೆ ಪ್ರಯತ್ನಿಸುತ್ತಿದ್ದೇನೆ ಎಂಬ ಅಪ್ಪಟ ಸುಳ್ಳು ಸುದ್ದಿ ಹರದಾಡುತ್ತಿದೆ. ಇದು ಸತ್ಯಕ್ಕೆ ದೂರವಾದ ಸಂಗತಿ. ಪಕ್ಷದಲ್ಲಿ ಅರ್ಹರಾಗಿರುವವರು ಅನೇಕ ಮಂದಿ ಹಿರಿಯರಿದ್ದಾರೆ. ಪಕ್ಷದಲ್ಲಿ ಸುಮ್ಮನೆ ಗೊಂದಲ ಮೂಡಿಸುವ ಪ್ರಯತ್ನ ಇದಾಗಿದೆ ಎಂದು ತಿಳಿಸಿ ಟ್ವೀಟ್ ಮಾಡಿದ್ದಾರೆ.

ವರುಣ ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಪರಿಷತ್ ಚುನಾವಣೆಯಲ್ಲಿ ಪುತ್ರ ವಿಜಯೇಂದ್ರನನ್ನು ಕಣಕ್ಕೆ ಇಳಿಸಲು ಬಿಎಸ್ ಯಡಿಯೂರಪ್ಪನವರು ಚಿಂತನೆ ನಡೆಸಿದ್ದಾರೆ. ಹಾಗಾಗಿ ಹೈಕಮಾಂಡ್ ಜೊತೆ ಬಿಎಸ್‍ವೈ ಚರ್ಚೆ ನಡೆಸಿದ್ದಾರೆ ಎನ್ನುವ ವಿಚಾರ ಮಾಧ್ಯಮಗಳಿಗೆ ಸಿಕ್ಕಿತ್ತು. ಆದರೆ ಈಗ ಈ ಸುದ್ದಿಗಳಿಗೆ ವಿಜಯೇಂದ್ರ ಅವರು ಫುಲ್ ಸ್ಟಾಪ್ ಹಾಕಿದ್ದಾರೆ.

 

Share This Article
Leave a Comment

Leave a Reply

Your email address will not be published. Required fields are marked *