ಯಾವುದಕ್ಕೂ ಆಸೆ ಪಟ್ಟಿಲ್ಲ, ಕೊಟ್ಟ ಖಾತೆಯನ್ನು ಒಪ್ಪಿಕೊಳ್ತೇನೆ- ಜಿ.ಟಿ ದೇವೇಗೌಡ

Public TV
1 Min Read

ಬೆಂಗಳೂರು: ನಾನು ಯಾವ ಖಾತೆಯನ್ನು ಕೇಳಿಲ್ಲ. ಯಾವ ಖಾತೆಯ ಮೇಲೂ ಆಸೆ ಪಟ್ಟಿಲ್ಲ ಅಂತ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಹೇಳಿದ್ದಾರೆ.

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಭೇಟಿ ಬಳಿಕ ನಗರದಲ್ಲಿ ಸಚಿವರ ಪಟ್ಟಿ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಖಾತೆ ಹಂಚಿಕೆ ಬಗ್ಗೆ ಇನ್ನೂ ನಿರ್ಧಾರ ಆಗಿಲ್ಲ. ದೊಡ್ಡವರ ಆಶೀರ್ವಾದ ಪಡೆಯಲು ಬಂದಿದ್ದೇನೆ. ಖಾತೆ ಹಂಚಿಕೆ ಪಟ್ಟಿಯಲ್ಲಿ ನನ್ನ ಹೆಸರು ಇದೆ ಅಂತ ಹೇಳಿದ್ರು.

ಖಾತೆ ಹಂಚಿಕೆ ಬಗ್ಗೆ ಪರಮಾಧಿಕಾರ ಮುಖ್ಯಮಂತ್ರಿಗಳಿಗೆ ಇದೆ. ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳು ಕೂತು ಅದನ್ನೆಲ್ಲಾ ತೀರ್ಮಾನ ಮಾಡುತ್ತಾರೆ. ಅದಕ್ಕೆ ಶಾಸಕರಾದ ನಾವೆಲ್ಲ ಒಟ್ಟಾಗಿ ಅವರಿಗೆ ಜವಾಬ್ದಾರಿ ಕೊಟ್ಟಿದ್ದೇವೆ. ಸಂಪುಟ ರಚನೆಯನ್ನು ಸಿಎಂ ಯಶಸ್ವಿಯಾಗಿ ನಿರ್ವಹಿಸುತ್ತಾರೆ. ಅವರು ಯಾವ ಖಾತೆ ಕೊಟ್ರೂ ಒಪ್ಪಿಕೊಳ್ಳುತ್ತೇನೆ ಅಂದ್ರು.

ದೇವೇಗೌಡರನ್ನು ಭೇಟಿ ಮಾಡಿ ಅವರ ಆಶೀರ್ವಾದ ಪಡೆದಿದ್ದೇನೆ ಹೊರತು ಖಾತೆ ಹಂಚಿಕೆ ಬಗ್ಗೆ ಮಾತುಕತೆ ನಡೆಸಿಲ್ಲ. ಖಾತೆ ಹಂಚಿಕೆ ಬಗ್ಗೆ ನಮಗೆ ಈವರೆಗೂ ಯಾವುದೇ ಮಾಹಿತಿ ಬಂದಿಲ್ಲ ಅಂದ್ರು.

ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟವಾಗಿದ್ದು, ಜೆಡಿಎಸ್ ನಲ್ಲಿ ಅಂತಹ ಯಾವುದೇ ಅಸಮಾಧಾನವಿಲ್ಲ. ಹೀಗಾಗಿ ಎಲ್ಲರೂ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಹಾಗೂ ಕುಮಾರಣ್ಣ ಏನ್ ಹೇಳ್ತಾರೋ ಅದನ್ನು ಕೇಳಲು ರೆಡಿಯಾಗಿದ್ದೇವೆ ಅಂತ ಹೇಳಿದ್ರು.

Share This Article
Leave a Comment

Leave a Reply

Your email address will not be published. Required fields are marked *