ನನಗೆ ಯಾವುದೇ ನೋಟಿಸ್‌ ಬಂದಿಲ್ಲ: ಯತ್ನಾಳ್‌

Public TV
2 Min Read

ವಿಜಯಪುರ: ನನಗೆ ಯಾವುದೇ ಶೋಕಾಸ್‌ ನೋಟಿಸ್ (Show Cause Notice) ಬಂದಿಲ್ಲ. ಸುಮ್ಮನೆ ಊಹಾಪೋಹ ಹರಡಿಸಿದ್ದಾರೆ. ನಾನು ನೋಟಿಸ್ ಕೊಡುವಂತಹ ಯಾವುದೇ ಪಕ್ಷ ವಿರೋಧಿ ಹೇಳಿಕೆ ನೀಡಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Bsanagouda Patil Yatnal) ಸ್ಪಷ್ಟನೆ ನೀಡಿದ್ದಾರೆ.

ನಾನು ಭ್ರಷ್ಟರು, ವಂಶಪಾರಂಪರ್ಯ ರಾಜಕೀಯ ಮುಂದುವರೆಸುವವರ ಬಗ್ಗೆ ಮಾತನಾಡಿದ್ದೇನೆ. ನನಗೆ ನೋಟಿಸ್ ನೀಡಿದ್ದರೆ ಇಷ್ಟೊತ್ತಿಗೆ ಬಂದಿರುತ್ತಿತ್ತು. ಯತ್ನಾಳ್ ಇಷ್ಟೆಲ್ಲ ಮಾತನಾಡಿದ್ದಾನೆ ನೋಟಿಸ್ ಯಾಕೆ ನೀಡಿಲ್ಲ ಎಂದು ಕೆಲವರಿಗೆ ಕಾಡುತ್ತಿದೆ. ಅದಕ್ಕೆ ಇಂತಹ ಊಹಾಪೋಹ ಹರಡಿಸುತ್ತಿದ್ದಾರೆ ಎಂದು ದೂರಿದರು.

ಹಿಂದೆ ವಾಜಪೇಯಿ ಅವರು ಇದ್ದಾಗಲು ನನಗೆ ನೋಟಿಸ್ ನೀಡಿದ್ದರು. ಆದರೆ ನಾನು ಮೂರು ತಿಂಗಳಿಗೆ ಕೇಂದ್ರ ಮಂತ್ರಿಯಾದೆ. ಇದೆಲ್ಲ ರಾಜಕೀಯ ವಿರೋಧಿಗಳ ಷಡ್ಯಂತ್ರ ಅಷ್ಟೇ. ಹೈಕಮಾಂಡ್ ನೋಟಿಸ್ ಕೊಡುವ ಯಾವುದೇ ವಾತಾವರಣ ಇಲ್ಲ. ಇದು ಚುನಾವಣೆಯ ಸಮಯ. ಕೆಲ ಜನ ಆ ರೀತಿ ಭಯ ಹುಟ್ಟಿಸುವ ಕೆಲಸ ಮಾಡುತ್ತಾರೆ. ಭಯಪಡುವಂತದ್ದು, ಅಂಜುವಂತದ್ದು ಏನಿಲ್ಲ. ನಾನು ಏನೇ ಮಾತನಾಡಿದರೂ ಪಕ್ಷದ ಹಿತದೃಷ್ಟಿಯಿಂದ ಮಾತನಾಡಿದ್ದೇನೆ. 150 ಸೀಟ್ ಬರಬೇಕು ಎನ್ನುವ ಉದ್ದೇಶದಿಂದ ಮಾತನಾಡಿದ್ದೇನೆ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಯತ್ನಾಳ್‌ಗೆ ಶಾಕ್‌ ಕೊಟ್ಟ ಬಿಜೆಪಿ ಹೈಕಮಾಂಡ್‌

ನನ್ನ ವಿರೋಧಿಗಳಿಗೆ ಭಯವಾಗಿದೆ. ಸುಳ್ಳು ಸುದ್ದಿ ಹರಡುತ್ತಿದ್ದಾರೆ. ಯಾವ ಭಯಕ್ಕೂ ಅಂಜುವ ಮಗ ನಾನಲ್ಲ. ನಿನ್ನೆ ವರಿಷ್ಠರೇ ಮಾತನಾಡಿದ್ದು ರಾಷ್ಟ್ರೀಯ ಕಾರ್ಯಕಾರಣಿಯಲ್ಲೇ ಬಹುದೊಡ್ಡ ನಿರ್ಣಯಗಳು ತೆಗೆದುಕೊಳ್ಳುವ ಸಾಧ್ಯತೆಗಳಿವೆ. ಮುಂದಿನ ಚುನಾವಣೆ ದೃಷ್ಟಿಯಿಂದ ಬಹಳಷ್ಟು ಬದಲಾವಣೆ ಮಾಡುವ ಸಾಧ್ಯತೆ ಇದ್ದು ನನ್ನ ಪರವಾಗಿಯೂ ಒಳ್ಳೆಯ ನಿರ್ಣಯ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅರುಣ್‌ಸಿಂಗ್ ಅವರು ನನ್ನ ಜೊತೆಗೆ ಮಾತನಾಡಿಲ್ಲ. ಹೈಕಮಾಂಡ್ ವರಿಷ್ಠರೊಬ್ಬರು ಮಾತ್ರ ಮಾತನಾಡಿದ್ದಾರೆ. ನಾನು ಮಂತ್ರಿಗಿರಿಯು ಕೇಳಿಲ್ಲ, ಮುಖ್ಯಮಂತ್ರಿ ಸೀಟು ಕೇಳಿಲ್ಲ. ನಾನು ಕರ್ನಾಟಕದಲ್ಲಿ ಮಂತ್ರಿಗಿಂತ ಫವರ್ ಪುಲ್ ಆಗಿದ್ದೇನೆ. ಎಲ್ಲಾ ಮಂತ್ರಿಗಳು ನನ್ನ ಮಾತು ಕೇಳುತ್ತಾರೆ. ಎಲ್ಲಾರೂ ಪ್ರೀತಿ, ವಿಶ್ವಾಸದಿಂದ ನನ್ನೊಂದಿಗೆ ಇದ್ದಾರೆ. ನಾನು ಯಾವುದನ್ನು ನಿರೀಕ್ಷೆ ಮಾಡಲ್ಲ. ಓರ್ವ ಸಿಎಂನಂತೆ ನಾನು ಶಾಸಕನಾಗಿಯೇ ಎಲ್ಲಾ ಸಚಿವರ ಮೇಲಿದ್ದೇನೆ ಎಂದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *