ಸಿಎಂ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ: ಎಚ್‍ಡಿಡಿ

Public TV
1 Min Read

ಮಂಡ್ಯ: ಮಣ್ಣಿನ ಮಕ್ಕಳು ಎಂದು ಹೇಳಿಕೊಂಡು ತಿರುಗಾಡುವವರಿಂದ ಮಣ್ಣಿನ ಮಕ್ಕಳಿಗೆ ಏನೂ ಉಪಯೋಗವಾಗಿಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಮಾಜಿ ಪ್ರಧಾನಿ ದೇವೇಗೌಡ ನಿರಾಕರಿಸಿದ್ದಾರೆ.

ಇನ್ನೊಬ್ಬರಿಗೆ ಠೀಕೆ ಮಾಡುವ ಅವಶ್ಯಕತೆ ನನಗಿಲ್ಲ. ಸಿದ್ದರಾಮಯ್ಯ, ಯಡಿಯೂರಪ್ಪ, ಮೋದಿ ಯಾರನ್ನೂ ಕುರಿತು ಠೀಕೆ ಮಾಡಬೇಕಾದ್ದಿಲ್ಲ. ನನಗೆ ಎಲ್ಲವೂ ಗೊತ್ತಿದೆ, ಆದರೆ ಅವರಿಗೆ ಇಂತಹ ವಿಷಯದಲ್ಲಿ ನಾನು ಪ್ರತಿಕ್ರಿಯೆ ನೀಡಬೇಕಿಲ್ಲ ಎಂದು ಹೇಳಿದರು.

ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಬಗ್ಗೆ ಮಾತನಾಡಿದ ಅವರು, ಅದರ ಬಗ್ಗೆ ಯೋಚನೆ ಮಾಡುತ್ತಿದ್ದೇನೆ. ವಾಸ್ತವಾಂಶ ಹೇಳೋದು ಕಷ್ಟ ಇದೆ. ಕೇಂದ್ರ ಸರ್ಕಾರದ ಪ್ರತಿನಿಧಿ ವಾದ ಮಂಡನೆ ಮಾಡುವಾಗ ಕಾವೇರಿ ನೀರು ನಿರ್ವಹಣ ಮಂಡಳಿ ಪಾರ್ಲಿಮೆಂಟ್‍ಗೆ ಇರೋ ಪವರ್ಸ್ ಎಂದು ಹೇಳಿದ್ದಾರೆ. ನ್ಯಾಯಪೀಠ ನಾವೇ ಮಾಡಿದರೆ ನಿಮಗೆ ಸಮಾಧಾನ ಇಲ್ಲವೇ ಎಂದು ಹೇಳಿದೆ. ಅದಕ್ಕೆ ನೀವೇ ಮಾಡಿದರೆ ಆಗಬಹುದು ಎಂದು ಉತ್ತರಿಸಿದ್ದಾರೆ. ಆದರೆ ಇದನ್ನು ಕರ್ನಾಟಕದ ನಾವು ವಿರೋಧ ಮಾಡಲೇಬೇಕು ಎಂದು ನಿರ್ಧಾರ ಮಾಡಿದ್ದೇವೆ. ರಾಜ್ಯ ಸರ್ಕಾರ ಮತ್ತು ನಮ್ಮ ವಕೀಲರು ಚರ್ಚಿಸುತ್ತಿದ್ದಾರೆ. ನೋಡೋಣ ಅವರು ಏನು ಮಾಡುತ್ತಾರೆ ಎಂದು ದೇವೇಗೌಡರು ತಿಳಿಸಿದರು.

ಮಗನ ಆರೋಗ್ಯದ ಬಗ್ಗೆ ಕೇಳಿದ ಪ್ರಶ್ನೆಗೆ ಎಚ್‍ಡಿಡಿ, ಕುಮಾರಸ್ವಾಮಿ ಆರೋಗ್ಯವಾಗಿದ್ದು, ವೈದ್ಯರು ಒಂದುವಾರ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯಲು ತಿಳಿಸಿದ್ದಾರೆ. ತೊಂದರೆಯೇನಿಲ್ಲ ಎಂದು ಹೇಳಿದರು.

ಮಾದ್ಯಮಗಳು ಕೇಳಿದ ಶ್ರೀರಂಗಪಟ್ಟಣ ಕ್ಷೇತ್ರದ ಜೆಡಿಎಸ್ ಟಿಕೆಟ್ ಹಂಚಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಲು ದೇವೇಗೌಡರು ನಿರಾಕರಿಸಿದರು.

Share This Article
Leave a Comment

Leave a Reply

Your email address will not be published. Required fields are marked *