ಸಿದ್ದರಾಮಯ್ಯರಿಗೆ ಕ್ಷೇತ್ರ ಬಿಟ್ಟುಕೊಡಲು ನಾನು ಸಿದ್ಧ: ಪುಟ್ಟರಂಗಶೆಟ್ಟಿ

Public TV
1 Min Read

ಚಾಮರಾಜನಗರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಯಾವ ಜಿಲ್ಲೆಯಲ್ಲಿ ಸ್ಪರ್ಧಿಸಿದರೂ ಗೆಲ್ಲುತ್ತಾರೆ. ಅವರು ನನ್ನ ಕ್ಷೇತ್ರಕ್ಕೆ ಬಂದರೂ ಬಿಟ್ಟುಕೊಡಲು ಸಿದ್ಧ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದ್ದಾರೆ.

ಇಂದು ಚಾಮರಾಜನಗರದ ನಗರಸಭೆಯಲ್ಲಿ ವಿಧಾನ ಪರಿಷತ್ ಚುನಾವಣೆ ಮತದಾನ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೊಡ್ಡ ನಾಯಕರೊಬ್ಬರು ನನ್ನ ಕ್ಷೇತ್ರಕ್ಕೆ ಬಂದರೆ ಅದು ಸೌಭಾಗ್ಯವೇ ಸರಿ. ಹೀಗಾಗಿ ಅವರು ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದರೆ ನಾನು ಕ್ಷೇತ್ರ ಬಿಟ್ಟುಕೊಡುತ್ತೇನೆ ಎಂದರು. ಇದನ್ನೂ ಓದಿ: ಫೋಟೋ ತೆಗೆಯುವಾಗ ಪುರುಷರು ಯಾಕೆ ತುಂಬಾ ಕಷ್ಟಪಡುತ್ತಾರೆ?: ರಾಧಿಕಾ ಪಂಡಿತ್

ಬಾದಾಮಿಯಲ್ಲಿ ಮತ್ತೆ ಸ್ಪರ್ಧಿಸಲು ಚಿಮ್ಮನಕಟ್ಟಿ ಆಕ್ಷೇಪ ವ್ಯಕ್ತಪಡಿಸಿದರು. ನಂತರ ಮಾಜಿ ಸಿಎಂ ಸಿದ್ದರಾಮಯ್ಯ ಮುಂದಿನ ಚುನಾವಣೆಯಲ್ಲಿ ಯಾವ ಕ್ಷೇತ್ರದಲ್ಲಿ ನೀಲ್ತಾರೆ ಅನ್ನೋ ಚರ್ಚೆ ಜೋರಾಗಿದೆ. ಈ ನಡುವೆ ಸಿದ್ದರಾಮಯ್ಯ ನಮ್ಮ ಕ್ಷೇತ್ರಕ್ಕೆ ಬಂದರೆ ಬಿಟ್ಟುಕೊಡಲು ಸಿದ್ಧವಿದ್ದು, ಚಾಮರಾಜನಗರ ಕ್ಷೇತ್ರ ಮತ್ತಷ್ಟು ಅಭಿವೃದ್ದಿಯಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಬಿಜೆಪಿ ಯುವ ಮುಖಂಡನನ್ನು ಚಾಕುವಿನಿಂದ ಇರಿದು ಕೊಂದ್ರು!

Share This Article
Leave a Comment

Leave a Reply

Your email address will not be published. Required fields are marked *