ನನ್ನ ಸಚಿವ ಸ್ಥಾನದ ಹಕ್ಕಿಗೆ ಅಡ್ಡಗಾಲು ಹಾಕಲು ಯಾರಿಂದಲೂ ಸಾಧ್ಯವಿಲ್ಲ: ಕಾಂಗ್ರೆಸ್ ಶಾಸಕ ವಿ.ಮುನಿಯಪ್ಪ

Public TV
1 Min Read

ಚಿಕ್ಕಬಳ್ಳಾಪುರ: ನಾನು ಸೀನಿಯರ್, ಸಚಿವ ಸ್ಥಾನ ನನ್ನ ಹಕ್ಕು. ಯಾರಿಂದಲೂ ನನ್ನ ಸಚಿವ ಸ್ಥಾನದ ಹಕ್ಕಿಗೆ ಅಡ್ಡಗಾಲು ಹಾಕಲು ಸಾಧ್ಯವಿಲ್ಲ ಎಂದು ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿ ಮುನಿಯಪ್ಪ ಹೇಳಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾಗಿದ್ದು ಸಂಪುಟ ರಚನೆಯ ಬಳಿಕ ಹಲವು ಕಾಂಗ್ರೆಸ್ ಶಾಸಕರು ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಬಹಿರಂಗವಾಗಿ ಪಕ್ಷದ ವಿರುದ್ಧವೇ ಅಸಮಾಧಾನ ಹೊರಹಾಕಿದ್ದರು. ಚಿಕ್ಕಬಳ್ಳಾಪುರದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನನ್ನ ಶಾಸಕ ಸ್ಥಾನದ ಅವಧಿ ಮುಗಿಯುವರೆಗೂ ಸಚಿವ ಸ್ಥಾನಕ್ಕಾಗಿ ನನ್ನ ಹೋರಾಟ ಮುಂದುವರೆಸುತ್ತೇನೆ. ಸಂಪುಟ ವಿಸ್ತರಣೆ ವೇಳೆಯಲ್ಲಿ ತಮಗೆ ಸಚಿವ ಸ್ಥಾನ ಸಿಗಲಿದೆ ಎಂಬ ಆತ್ಮ ವಿಶ್ವಾಸ ವ್ಯಕ್ತಪಡಿಸಿದ್ರು.

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಿಂದ ಈ ಬಾರಿ ಗೆಲುವು ಸಾಧಿಸಿರುವ ವಿ.ಮುನಿಯಪ್ಪ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದರು. ಆದ್ರೆ ಕೊನೆ ಘಳಿಗೆಯಲ್ಲಿ ಸಚಿವ ಸ್ಥಾನ ತಪ್ಪಿತ್ತು. ವಿ.ಮುನಿಯಪ್ಪ ಒಟ್ಟು ಐದು ಬಾರಿ ಶಿಡ್ಲಘಟ್ಟ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿ ಬಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *