ಮೈತ್ರಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದಿದ್ದು ಯಾಕೆ: ಕಾರಣ ಕೊಟ್ಟ ಪಕ್ಷೇತರರು

Public TV
1 Min Read

ಮುಂಬೈ: ಸಮ್ಮಿಶ್ರ ಸರ್ಕಾರಕ್ಕೆ ಅಭದ್ರತೆ ಕಾಡುತ್ತಿದೆ. ನಮ್ಮನ್ನು ಗಣನೆಗೆ ತೆಗೆದುಕೊಳ್ಳದ್ದಕ್ಕೆ ನಾವು ಬೆಂಬಲವನ್ನು ವಾಪಸ್ ಪಡೆಯುತ್ತಿರುವುದಾಗಿ ರಾಣೆಬೆನ್ನೂರು ಶಾಸಕ ಆರ್. ಶಂಕರ್ ತಿಳಿಸಿದ್ದಾರೆ.

ಮೃತ್ರಿ ಸರ್ಕಾರದ ಕಾರ್ಯವೈಖರಿಯಿಂದ ನಾವು ಬೇಸತ್ತಿದ್ದೇವೆ. ಹೀಗಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್‍ಗೆ ನೀಡಿದ್ದ ಮೈತ್ರಿಯನ್ನು ಹಿಂಪಡೆದಿದ್ದೇವೆ ಎಂದು ತಿಳಿಸಿದರು.

ಇದೇ ವೇಳೆ ಮಾತನಾಡಿದ ಮತ್ತೊಬ್ಬ ಪಕ್ಷೇತರ ಶಾಸಕ ಮುಳುಬಾಗಿಲು ನಾಗೇಶ್ ಅವರು, ಜನರು ಬಿಜೆಪಿಗೆ ಬೆಂಬಲ ನೀಡುತ್ತಿದ್ದು, ಮೈತ್ರಿ ಸರ್ಕಾರದಲ್ಲಿ ನಮ್ಮನ್ನು ಕಡೆಗಣಿಸಲಾಗುತ್ತಿದೆ. ಸಮ್ಮಿಶ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳು ಆಗುತ್ತವೆ ಅಂತ ಬೆಂಬಲ ನೀಡಿದ್ದೆ. ಆದರೆ ಅಂತಹ ಯಾವುದೇ ಬೆಳವಣಿಗೆಗಳು ಕಾಣುತ್ತಿಲ್ಲ. ಹೀಗಾಗಿ ನಾನು ಮೈತ್ರಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆದು, ಬಿಜೆಪಿಯನ್ನು ಅಧಿಕಾರಕ್ಕೆ ತರಲು ಮುಂದಾಗುತ್ತೇನೆ ಎಂದು ತಿಳಿಸಿದರು.

ಸಚಿವ ಸ್ಥಾನ ಹಿಂಪಡೆದಿದ್ದರಿಂದ ಆರ್.ಶಂಕರ್ ಅವರು ಮೈತ್ರಿ ಸರ್ಕಾರದ ವಿರುದ್ಧ ಅಸಮಾಧನವನ್ನು ಹೊರಹಾಕಿದ್ದರು. ಇತ್ತ ಸಚಿವ ಸ್ಥಾನ ನಿರೀಕ್ಷೆಯಲ್ಲಿದ್ದ ಪಕ್ಷೇತರ ಶಾಸಕ ನಾಗೇಶ್ ಅವರಿಗೆ ಎರಡನೇ ಹಂತದ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಸಿಕ್ಕಿರಲಿಲ್ಲ. ಈ ಕಾರಣಕ್ಕೆ ಇಬ್ಬರು ರಾಜ್ಯಪಾಲರಿಗೆ ಪತ್ರ ಬರೆದು ಸರ್ಕಾರಕ್ಕೆ ನೀಡಿದ ಬೆಂಬಲವವನ್ನು ವಾಪಸ್ ಪಡೆದಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *