ನನಗೆ ಕಾಂಗ್ರೆಸ್ ಪಕ್ಷದಿಂದ ಯಾವುದೇ ಆಫರ್ ಬರಲಿಲ್ಲ: ಸೋಮಶೇಖರ್ ಸ್ಪಷ್ಟನೆ

By
1 Min Read

ಮೈಸೂರು: ನನಗೆ ಕಾಂಗ್ರೆಸ್ (Congress) ಪಕ್ಷದಿಂದ ಯಾವುದೇ ಆಫರ್‌ಗಳು ಬರಲಿಲ್ಲ. ಸಚಿವ ನಾರಾಯಣ ಗೌಡ (Narayana Gowda) ಅವರ ಹೇಳಿಕೆಯನ್ನು ನಾನು ಗಮನಿಸಿದ್ದೇನೆ. ನನಗೆ ಆಫರ್ ಬರಲಿಲ್ಲ ಎಂದು ಅವರು ಹೇಳಿದ್ದಾರೆ. ಬಿಜೆಪಿ (BJP) ಸರ್ಕಾರದಲ್ಲಿ ಒಳ್ಳೆಯ ಕೆಲಸ ಮಾಡಿ ಎಂದು ಜವಾಬ್ದಾರಿ ಕೊಟ್ಟಿದ್ದಾರೆ. ಆ ಕೆಲಸವನ್ನು ಮಾಡುತ್ತಿದ್ದೇನೆ ಎಂದು ಸಚಿವ ಎಸ್.ಟಿ ಸೋಮಶೇಖರ್ (S.T.Somashekhar) ಸ್ಪಷ್ಟನೆ ನೀಡಿದರು.

ಮೈಸೂರಿನಲ್ಲಿ (Mysuru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿಗೆ ಒಂದು ತಿಂಗಳಿನಿಂದ ಬರದಿರುವುದಕ್ಕೆ ಚುನಾವಣೆ(Election) ಕಾರಣವಲ್ಲ. ಇಲಾಖೆಯ ಬೇರೆ ಬೇರೆ ಕಾರ್ಯಕ್ರಮಗಳ ಕಾರಣದಿಂದಾಗಿ ಬೇರೆ ಜಿಲ್ಲೆಗಳಿಗೆ ಓಡಾಡುತ್ತಿದ್ದೇನೆ. ಹೀಗಾಗಿ ಬರಲಿಲ್ಲ ಅಷ್ಟೆ. ವಿಜಯ ಸಂಕಲ್ಪ ಯಾತ್ರೆಯಲ್ಲಿ (Vijay Sankalpa Yatra) ನನಗೆ ಬೆಂಗಳೂರು ಜವಾಬ್ದಾರಿ ಇದೆ. ಅಲ್ಲಿ ಆ ಕೆಲಸ ಮಾಡುತ್ತಿದ್ದೇನೆ ಎಂದರು. ಇದನ್ನೂ ಓದಿ: ಲೋಕಾಯುಕ್ತ ಭರ್ಜರಿ ಬೇಟೆ- 8.12 ಕೋಟಿ ಹಣ ಸೀಜ್

ಬಿಜೆಪಿ ಶಾಸಕನ ಮನೆ ಮೇಲೆ ಲೋಕಾಯುಕ್ತ ದಾಳಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇದರಲ್ಲಿ ಪಕ್ಷಕ್ಕೆ ಯಾವುದೇ ಮುಜುಗರ ಇಲ್ಲ. ಲೋಕಾಯುಕ್ತ ಬಲಪಡಿಸಿದ ಕಾರಣಕ್ಕೆ ಇಂತಹ ದಾಳಿ ನಡೆದಿದೆ. ನನಗೆ ಇನ್ನೂ ಹೆಚ್ಚಿನ ವಿವರಗಳು ಬರಲಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಭ್ರಷ್ಟಾಚಾರಕ್ಕೆ ದಾಖಲೆಯಲ್ಲವೇ?- ಸಿಎಂಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಚಾಟಿ

S.T. Somashekhar

ಚಾಮರಾಜನಗರ (Chamarajanagara) ಜಿಲ್ಲೆಯಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರ‍್ರೆ ಕಾರ್ಯಕ್ರಮಕ್ಕೆ ವಿ.ಸೋಮಣ್ಣ (V.Somanna) ಗೈರು ವಿಚಾರವಾಗಿ ಮಾತನಾಡಿದ ಅವರು, ಸೋಮಣ್ಣ 45 ವರ್ಷದ ರಾಜಕೀಯ ಅನುಭವ ಇರುವವರು. ಈ ಬಗ್ಗೆ ಅವರೇ ಮಾತನಾಡುತ್ತಾರೆ ಎಂದರು. ಇದನ್ನೂ ಓದಿ: ಕೋಟಿ-ಕೋಟಿ ವಿಚಾರ, ವಿರೂಪಾಕ್ಷಪ್ಪ ವಿಚಾರಣೆ ಬಳಿಕ ಸತ್ಯ ತಿಳಿಯಲಿದೆ: ಆರಗ ಜ್ಞಾನೇಂದ್ರ

Share This Article
Leave a Comment

Leave a Reply

Your email address will not be published. Required fields are marked *