ನನಗ್ಯಾರ ಬೆಂಬಲವೂ ಬೇಡ, ನನಗಾಗಿ ಕೂಗೋದು ಬೇಡ: ಡಿಕೆಶಿ

Public TV
1 Min Read

ಚಿಕ್ಕಮಗಳೂರು: ನನಗೆ ಯಾರ ಬೆಂಬಲವೂ ಬೇಡ, ನನಗಾಗಿ ಯಾವ ನಾಯಕರು, ಶಾಸಕರು, ಬೆಂಬಲಿಗರು ಕೂಗೋದು ಬೇಡ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (D.K. Shivakumar) ಹೇಳಿದ್ದಾರೆ.

ಶೃಂಗೇರಿ (Sringeri) ಮಠದ ಹಿರಿಯ ಶ್ರೀಗಳು ಸನ್ಯಾಸತ್ವ ಸ್ವೀಕರಿಸಿ 50 ವರ್ಷವಾದ ಹಿನ್ನಲೆ, ಮಠದ ಆವರಣದಲ್ಲಿ ನಡೆಯುತ್ತಿರುವ ಸುವರ್ಣಭಾರತೀ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿದ್ದಾರೆ. ಕಾರ್ಯಕ್ರಮಕ್ಕೆ ತೆರಳುವ ಮುನ್ನ ಬೆಂಬಲಿಗರು ಅವರ ಪರ ಘೋಷಣೆ ಕೂಗಿದ್ದಾರೆ. ಈ ವೇಳೆ ಅವರು ಪ್ರತಿಕ್ರಿಯಿಸಿ, ನನಗೆ ಯಾರ ಬೆಂಬಲವಾಗಲಿ, ಘೋಷಣೆ ಕೂಗೋದು ಬೇಡ ಎಂದಿದ್ದಾರೆ.

ಟೆಂಪಲ್ ರನ್ ಎಂಬ ಮಾಧ್ಯಮದವರ ಪ್ರಶ್ನೆಗೆ, ನಾನು ದಿನ ಪೂಜೆ ಮಾಡ್ತೀನಿ. ನಾನು ಧರ್ಮದ ಮೇಲೆ ನಂಬಿಕೆ ಇಟ್ಟವನು. ಸಮಾಜ, ಜನ, ರಾಜ್ಯ, ಪಕ್ಷ, ಕುಟುಂಬಕ್ಕಾಗಿ ಪೂಜೆ ಮಾಡ್ತೀನಿ. ಟೆಂಪಲ್ ರನ್ ಏನಿಲ್ಲ, ಹಾಗಾದ್ರೆ ದೇವಸ್ಥಾನ ಏಕೆ, ಬೀಗ ಹಾಕ್ಬಿಡಿ. ದೇವನೊಬ್ಬ ನಾಮ ಹಲವು ಎನ್ನುವ ತತ್ವದ ಮೇಲೆ ನಂಬಿಕೆ ಇಟ್ಟವನು ನಾನು. ಅವರವರ ನಂಬಿಕೆ ಅವರವರ ಆಚಾರ-ವಿಚಾರ ಅವರಿಗೆ ಬಿಟ್ಟದ್ದು ಎಂದು ಹೇಳಿದ್ದಾರೆ.

ರಾಜಕಾರಣದಲ್ಲಿ ಯಾವ ತಿರುವು ಅವಶ್ಯಕತೆ ಇಲ್ಲ. ಪಕ್ಷ, ಹೈಕಮಾಂಡ್ ಹೇಳಿದ್ದೇ ಅಂತಿಮ. ನನಗೆ ಯಾರ ಒತ್ತಾಯ, ಬೆಂಬಲ ಏನೂ ಬೇಡ. ನನಗಾಗಿ ಕಾರ್ಯಕರ್ತರು, ಶಾಸಕರು, ಬೆಂಬಲಿಗರು, ಕೂಗೋದು ಬೇಡ. ಮಾಡೋ ಕೆಲಸ ಮಾಡೋಣ, ಫಲಾಫಲ ದೇವರಿಗೆ ಬಿಡೋಣ ಎಂದಿದ್ದಾರೆ,

Share This Article