ನಾನು ಕೊಟ್ಟ ಹಣವನ್ನು ಮತದಾರರಿಗೆ ಹಂಚದೇ, ಬೆಟ್ಟಿಂಗ್ ಆಡಿ ಸೋತ್ರು: ಕೈ ನಾಯಕ ಎಚ್.ಪಿ.ಮಂಜುನಾಥ್

Public TV
1 Min Read

ಮೈಸೂರು: ನಾನು ಮತದಾರರಿಗೆ ಹಂಚಲು ಕೊಟ್ಟಿದ್ದ ಹಣವನ್ನು ಕಾರ್ಯಕರ್ತರು ಬೆಟ್ಟಿಂಗ್ ಆಡಿ ಸೋತಿದ್ದಾರೆ ಎಂದು ಹುಣಸೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಚ್.ಪಿ.ಮಂಜುನಾಥ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆ ವೇಳೆ ಮತದಾರರಿಗೆ ಹಂಚಲು ಕೊಟ್ಟಿದ್ದ ಹಣವನ್ನು ಕಾರ್ಯಕರ್ತರು ಬೆಟ್ಟಿಂಗ್ ಆಡಿ ಸೋತಿದ್ದಾರೆ. ಹಣವನ್ನು ತಾವೇ ಉಳಿಸಿಕೊಂಡಿದ್ದರೆ ಸಂತೋಷವಿತ್ತು. ಆದರೆ ಅವರು ದುಡ್ಡು ಹಾಳು ಮಾಡಿಕೊಂಡಿದ್ದಾರೆ. ಹಣವನ್ನು ದುಪ್ಪಟ್ಟು ಮಾಡಲು ಹೋಗಿ ಸೋತಿದ್ದಾರೆ. ನನ್ನ ಬಳಿ ಕೆಟ್ಟ ಹುಡುಗರಿದ್ದಾರೆ. ಯಾರಾದರು ಅವರ ಬೆನ್ನುತಟ್ಟಿ ನನ್ನ ವಿರುದ್ಧ ನಿಲ್ಲವಂತೆ ಹೇಳಿದರೂ ಅವರು ಹಾಗೇ ಮಾಡುವುದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಹೈಕಮಾಂಡ್ ಹಾಗೂ ಪಕ್ಷದ ನಿಧಾರವನ್ನು ಪಾಲಿಸುತ್ತೇನೆ. ನಮ್ಮ ಪಕ್ಷ ಏನು ತೀರ್ಮಾನ ಕೈಗೊಂಡಿದೆಯೋ ಅದಕ್ಕೆ ನಮ್ಮ ಸಹಮತವಿದೆ. ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಬೇಕು. ಅವರಿಗೆ ಸಿದ್ದರಾಮಯ್ಯ ಅವರ ಆಶೀರ್ವಾವಿದೆ ಎಂದು ಎಚ್.ಪಿ.ಮಂಜುನಾಥ್ ಮೂರು ಬಾರಿ ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *