ಹೆಬ್ಬಾಳ ಟನಲ್ ಡಿಪಿಆರ್‌ನಲ್ಲಿ ಲೋಪದೋಷ ಪತ್ತೆ – 1 ತಿಂಗಳ ಹಿಂದೆಯೇ ನ್ಯೂನತೆ ತಿಳಿಸಿದ್ದೆ: ಪಿಸಿ ಮೋಹನ್‌

Public TV
2 Min Read

ಬೆಂಗಳೂರು: ಡಿಪಿಆರ್ (DPR) ಅಧ್ಯಯನಕ್ಕಾಗಿ ಸರ್ಕಾರವೇ ರಚಿಸಿದ ಸಮಿತಿ ಇದೀಗ ಡಿಪಿಆರ್‌ನಲ್ಲಿ ಲೋಪದೋಷಗಳನ್ನು ಪತ್ತೆಹಚ್ಚಿದ್ದನ್ನು ಪ್ರಶ್ನಿಸಿ ಸಂಸದ ಪಿಸಿ ಮೋಹನ್  (PC Mohan) ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಟನಲ್ ಡಿಪಿಆರ್ ಅಧ್ಯಯನಕ್ಕಾಗಿ ರಾಜ್ಯ ಸರ್ಕಾರವೇ ನಗರಾಭಿವೃದ್ಧಿ ಇಲಾಖೆಯ ಐವರ ತಜ್ಞರ ಸಮಿತಿ ರಚನೆ ಮಾಡಿತ್ತು. ಈಗ ಆ ಸಮಿತಿಯೇ ಡಿಪಿಆರ್‌ನಲ್ಲಿ ಇರುವ ಲೋಪದೋಷಗಳನ್ನ ಪತ್ತೆಹಚ್ಚಿದೆ. ಈ ಕುರಿತು ಸಂಸದ ಪಿಸಿ ಮೋಹನ್ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕಳೆದ ಒಂದು ತಿಂಗಳ ಹಿಂದೆ ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ಮಾರ್ಗದ ನ್ಯೂನತೆಗಳನ್ನ ಬಿಚ್ಚಿಟ್ಟಿದ್ದೆ. ಆದರೆ ಇದೀಗ ಸರ್ಕಾರ ರಚಿಸಿದ ತಜ್ಞರ ಸಮಿತಿಯೇ ಡಿಪಿಆರ್ ಲೋಪದೋಷಗಳನ್ನ ಪತ್ತೆ ಹಚ್ಚಿದೆ. ವರದಿಯಲ್ಲಿ ದುಬಾರಿ ವೆಚ್ಚ, ಅಸಮರ್ಪಕ, ಭೂ ಅವೈಜ್ಞಾನಿಕ ವಿಚಾರವಾಗಿ ತಜ್ಞರು ಉಲ್ಲೇಖಿಸಿದ್ದಾರೆ ಎಂದು ಸರ್ಕಾರವನ್ನ ಪ್ರಶ್ನಿಸಿದ್ದಾರೆ.ಇದನ್ನೂ ಓದಿ:ಡಿಕೆಶಿ ಕನಸಿನ ಕೂಸು ಟನಲ್‌ ರಸ್ತೆ ಯೋಜನೆಗೆ ವಿಘ್ನ – ಡಿಪಿಆರ್‌ನಲ್ಲಿ ಲೋಪದೋಷ ಪತ್ತೆ

ತರಾತುರಿಯಲ್ಲಿ ಡಿಪಿಆರ್ ತಯಾರಿಕೆ ಮಾಡಿದ್ದಾರೆ ಎಂದು ಹೇಳಿರುವ ಸಮಿತಿ ಟನಲ್ ದೊಡ್ಡ ಯೋಜನೆ ಕೇವಲ 4 ಕಡೆ ಮಾತ್ರ ಮಣ್ಣಿನ ಪರೀಕ್ಷೆ ಮಾಡಲಾಗಿದೆ. ಇದು ಸಾಕಾಗಲ್ಲ ಎಂದು ತಿಳಿಸಿದೆ. ಹೆಬ್ಬಾಳ – ಸಿಲ್ಕ್ ಬೋರ್ಡ್ಗೆ ರೆಡ್‌ಲೈನ್ ಮೆಟ್ರೋ ಮಾರ್ಗ ಬರಬೇಕಾದ್ರೆ ಟನಲ್ ಏಕೆ? ಲಾಲ್ ಬಾಗ್ ಬಳಿ ಮೆಟ್ರೋ ಮಾರ್ಗ ಬರಬೇಕಾದ್ರೆ ಟನಲ್ ಯಾಕೆ ಅಂತಲೂ ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ.

ಟನಲ್ ಡಿಪಿಆರ್‌ನಲ್ಲಿ ಲೋಪದೋಷ – ತಜ್ಞರ ವರದಿಯಲ್ಲೇನಿದೆ?
* ಟನಲ್ ದೊಡ್ಡ ಯೋಜನೆ, 4 ಕಡೆ ಮಾತ್ರ ಮಣ್ಣಿನ ಪರೀಕ್ಷೆ ಸಾಕಾಗಲ್ಲ
* ಹೆಬ್ಬಾಳ-ಸಿಲ್ಕ್ ಬೋರ್ಡ್ಗೆ ರೆಡ್‌ಲೈನ್ ಮೆಟ್ರೋ ಇದ್ರೆ ಟನಲ್ ಏಕೆ..?
* ಲಾಲ್‌ಬಾಗ್ ಬಳಿ ಮೆಟ್ರೋ ಮಾರ್ಗ ಬರಬೇಕಾದ್ರೆ ಟನಲ್ ಯಾಕೆ..?
* ಪೀಕ್ ಅವರ್ ಟ್ರಾಫಿಕ್ ಗಣನೆಗೆ ತೆಗೆದುಕೊಂಡಿಲ್ಲ
* ಕನಿಷ್ಠ 25 ವರ್ಷಕ್ಕೆ ಯೋಜನೆ ರೂಪಿಸಬೇಕು, 10 ವರ್ಷಕ್ಕಲ್ಲ
* ಪಾದಚಾರಿ, ಒಳಚರಂಡಿ, ನೈಸರ್ಗಿಕ ವಿಪತ್ತು ನಿರ್ವಹಣೆ ಬಗ್ಗೆ ಉಲ್ಲೇಖ
* ಬಿಎಂಟಿಸಿ, ಮೆಟ್ರೋ, ಉಪನಗರ ರೈಲುಗಳಿಗೆ ಅನಾನುಕೂಲದ ಮಾಹಿತಿ ಇಲ್ಲ
* ಸುರಂಗ ರಸ್ತೆ, ಪರಿಸರ ಕಾಳಜಿ, ಸಾರಿಗೆ ವ್ಯವಸ್ಥೆ ನಿರ್ವಹಣೆ ಉಲ್ಲೇಖಿಸಿಲ್ಲ
* ಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳ್ಳುವ ಮೊದಲೇ ಜಿಬಿಎಯಿಂದ ಡಿಪಿಆರ್
* ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರ ಪರಿಶೀಲನೆ ನಡೆಸಿಲ್ಲ.

ಏನಿದು ಯೋಜನೆ?
ಹೆಬ್ಬಾಳದಿಂದ-ಸಿಲ್ಕ್ ಬೋರ್ಡ್ ವರೆಗೆ 18 ಸಾವಿರ ಕೋಟಿ ರೂ. ವೆಚ್ಚದಲ್ಲಿ 19 ಕಿಮೀ ಉದ್ದದ ಸುರಂಗ ಮಾರ್ಗ ನಿರ್ಮಿಸುವ ಯೋಜನೆ ಇದಾಗಿದೆ. ಇದಕ್ಕಾಗಿ ಡಿಪಿಆರ್ ಕೂಡ ರಚನೆ ಮಾಡಲಾಗಿದೆ. ಸುರಂಗ ಮಾರ್ಗದಿಂದ ಲಾಲ್‌ಬಾಗ್‌ಗೂ ಹಾನಿಯಾಗುವ ಬಗ್ಗೆ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಸಾರ್ವಜನಿಕರ ವಿರೋಧ, ಡಿಪಿಆರ್ ಲೋಪದೋಷಗಳನ್ನ ಗಮನದಲ್ಲಿಟ್ಟುಕೊಂಡು ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಿದೆ ತಜ್ಞರ ಸಮಿತಿ.ಇದನ್ನೂ ಓದಿ:ಡಿಕೆಶಿ ಕನಸಿನ ಟನಲ್‌ ರೋಡ್‌ ಡಿಪಿಆರ್‌ನಲ್ಲಿ ಲೋಪದೋಷ!

Share This Article