ನನ್ನ ಮಾರ್ಗದರ್ಶಕನನ್ನು ಕಳೆದುಕೊಂಡಿದ್ದೇನೆ: ಮನಮೋಹನ್‌ ಸಿಂಗ್‌ ನಿಧನಕ್ಕೆ ಕಂಬನಿ ಮಿಡಿದ ರಾಗಾ

Public TV
2 Min Read

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ (Manmohan Singh) ನಿಧನಕ್ಕೆ ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಕಂಬನಿ ಮಿಡಿದಿದ್ದಾರೆ. ನನ್ನ ಮಾರ್ಗದರ್ಶಕನನ್ನು ಕಳೆದುಕೊಂಡಿದ್ದೇನೆ ಎಂದು ನೋವಿನಿಂದ ನುಡಿದಿದ್ದಾರೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಭಾಗವಹಿಸಲು ಕರ್ನಾಟಕದ ಬೆಳಗಾವಿಗೆ ರಾಹುಲ್‌ ಗಾಂಧಿ ಆಗಮಿಸಿದ್ದರು. ಈ ಹೊತ್ತಿನಲ್ಲೇ ಮನಮೋಹನ್‌ ಸಿಂಗ್‌ ಅವರ ನಿಧನದ ವಾರ್ತೆ ಕೇಳಿ ದುಃಖಿಸಿದ್ದಾರೆ. ಇದನ್ನೂ ಓದಿ: ಮಾಜಿ ಪ್ರಧಾನಿ, ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್‌ ಸಿಂಗ್‌ ಇನ್ನಿಲ್ಲ

ಎಕ್ಸ್‌ನಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿರುವ ರಾಹುಲ್‌ ಗಾಂಧಿ, ಮನಮೋಹನ್ ಸಿಂಗ್ ಅವರು ಭಾರತವನ್ನು ಅಪಾರ ಬುದ್ಧಿವಂತಿಕೆ ಮತ್ತು ಸಮಗ್ರತೆಯಿಂದ ಮುನ್ನಡೆಸಿದರು. ಅವರ ನಮ್ರತೆ ಮತ್ತು ಅರ್ಥಶಾಸ್ತ್ರದ ಆಳವಾದ ತಿಳುವಳಿಕೆಯು ರಾಷ್ಟ್ರವನ್ನು ಪ್ರೇರೇಪಿಸಿತು ಎಂದು ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ: ಶ್ರೇಷ್ಠ ನಾಯಕನನ್ನ ಭಾರತ ಕಳೆದುಕೊಂಡಿದೆ: ಪ್ರಧಾನಿ ಮೋದಿ ಸಂತಾಪ

ನಾನು ಮಾರ್ಗದರ್ಶಕನನ್ನು ಕಳೆದುಕೊಂಡಿದ್ದೇನೆ. ಅವರನ್ನು ಮೆಚ್ಚಿದ ಲಕ್ಷಾಂತರ ಜನರು ಅವರನ್ನು ಅತ್ಯಂತ ಹೆಮ್ಮೆಯಿಂದ ನೆನಪಿಸಿಕೊಳ್ಳುತ್ತಾರೆ. ಶ್ರೀಮತಿ ಕೌರ್ (ಸಿಂಗ್ ಅವರ ಪತ್ನಿ) ಮತ್ತು ಕುಟುಂಬಕ್ಕೆ ನನ್ನ ಹೃತ್ಪೂರ್ವಕ ಸಂತಾಪಗಳು ಎಂದು ಎಕ್ಸ್‌ನಲ್ಲಿ ರಾಹುಲ್‌ ಗಾಂಧಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನ – ಶುಕ್ರವಾರ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ

ಮನಮೋಹನ್‌ ಸಿಂಗ್‌ ಅವರ ನಿಧನಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಸಂತಾಪ ವ್ಯಕ್ತಪಡಿಸಿದ್ದಾರೆ. ಸರ್ದಾರ್‌ ಮನಮೋಹನ್‌ ಸಿಂಗ್ ಅವರ ಪ್ರಾಮಾಣಿಕತೆ ಯಾವಾಗಲೂ ನಮಗೆ ಸ್ಫೂರ್ತಿಯಾಗಿರುತ್ತದೆ. ಅವರು ತಮ್ಮ ವಿರೋಧಿಗಳಿಂದ ಅನ್ಯಾಯದ ಮತ್ತು ಆಳವಾದ ವೈಯಕ್ತಿಕ ದಾಳಿಗೆ ಒಳಗಾದ ಹೊರತಾಗಿಯೂ ರಾಷ್ಟ್ರಕ್ಕೆ ಸೇವೆ ಸಲ್ಲಿಸುವ ಬದ್ಧತೆಯಲ್ಲಿ ದೃಢವಾಗಿದ್ದರು. ಈ ದೇಶವನ್ನು ನಿಜವಾಗಿಯೂ ಪ್ರೀತಿಸುವವರಲ್ಲಿ ಅವರು ಶಾಶ್ವತವಾಗಿ ನಿಲ್ಲುತ್ತಾರೆ. ಅವರು ನಿಜವಾದ ಸಮಾನತಾವಾದಿ, ಬುದ್ಧಿವಂತ, ಬಲವಾದ ಇಚ್ಛಾಶಕ್ತಿ ಮತ್ತು ಕೊನೆಯವರೆಗೂ ಧೈರ್ಯಶಾಲಿಯಾಗಿದ್ದರು. ರಾಜಕೀಯದ ಒರಟು ಜಗತ್ತಿನಲ್ಲಿ ವಿಶಿಷ್ಟವಾದ ಘನತೆ ಮತ್ತು ಸೌಮ್ಯ ವ್ಯಕ್ತಿಯಾಗಿದ್ದರು ಎಂದು ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ: ಭಾರತದ ಮೊದಲ ಸಿಖ್‌ ಪ್ರಧಾನಿ ಮನಮೋಹನ್‌ ಸಿಂಗ್‌ – ಸಜ್ಜನ, ಮಹಾನ್‌ ಮೇಧಾವಿಯ ಜೀವನ, ರಾಜಕೀಯ ಸಾಧನೆ

Share This Article