ಪಕ್ಷಾಂತರ ಮಾಡಿ ನಾನು ದೊಡ್ಡ ತಪ್ಪು ಮಾಡಿದೆ: ಎಂಟಿಬಿ ನಾಗರಾಜ್

Public TV
1 Min Read

ಚಿಕ್ಕಬಳ್ಳಾಪುರ: ಈಚೆಗಷ್ಟೇ ಇಲ್ಲಿನ ಬಾಗೇಪಲ್ಲಿ ಪಟ್ಟಣದ ಪುರಸಭೆಯಲ್ಲಿ ವಸತಿನಿಲಯಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ ಸಚಿವ ಎಂಟಿಬಿ ನಾಗರಾಜ್ ನಾನು ಪಕ್ಷಾಂತರ ಮಾಡಿ ದೊಡ್ಡ ತಪ್ಪು ಮಾಡಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

MTB NAGARAJ

ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಮೊದಲ ಸಚಿವ ಸಂಪುಟ ರಚನೆ ಮಾಡಿದಾಗ ಖಾತೆ ಹಂಚಿಕೆ ವಿಚಾರದಲ್ಲಿ ಅಸಮಾದಾನ ವ್ಯಕ್ತಪಡಿಸಿದ ಎಂಟಿಬಿ, ಈ ಹಿಂದಿನ ಮುಖ್ಯಮಂತ್ರಿಗಳು ಮತ್ತು ಈಗಿನ ಮುಖ್ಯಮಂತ್ರಿಗಳು ನನಗೆ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಖಾತೆ ಹಂಚಿಕೆಯಲ್ಲಿ ನನಗೆ ಅಸಮಧಾನವಿದೆ ಎಂದು ಟ್ವೀಟ್‌ನಲ್ಲಿ ಬರೆದುಕೊಂಡಿದ್ದರು. ಇದೀಗ ಮತ್ತೆ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸಿದ್ಧರಾಮಯ್ಯ ಆಡಳಿತದಲ್ಲಿ ಹೇಳಿಕೊಳ್ಳುವ ಸಾಧನೆ ಮಾಡಿಲ್ಲ: ಗೋವಿಂದ ಕಾರಜೋಳ

ಕಾರ್ಯಕ್ರಮದ ವೇಳೆ ಮಾತನಾಡಿದ್ದ ಅವರು, ಜನರ ಸೇವೆ ಮಾಡಲು ನಾನು ರಾಜಕಾರಣಕ್ಕೆ ಬಂದಿದ್ದು. ಆದ್ರೆ ಇದ್ದ ಪಕ್ಷವನ್ನು ಬಿಟ್ಟು ಬೇರೆ ಪಕ್ಷಕ್ಕೆ ಬಂದದ್ದು ನಾನು ಮಾಡಿದ ದೊಡ್ಡ ತಪ್ಪು. ನನ್ನ ಜೀವನದಲ್ಲಿ ನಾನು ಬೇರೆ ಯಾವ ತಪ್ಪು ಮಾಡಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ದರು.

ಇದೀಗ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಎಂಟಿಬಿ, ಬಿಜೆಪಿ ಬಗ್ಗೆ ಅಸಮಾಧಾನ ಇಲ್ಲ, ನನ್ನ ಹೇಳಿಕೆಗೆ ಬೇರೆ ಅರ್ಥ ಬೇಡ. ಪಕ್ಷಾಂತರದ ಬಗೆಗಿನ ನನ್ನ ಹೇಳಿಕೆ ನೈತಿಕ ಮತ್ತು ಸೈದ್ಧಾಂತಿಕವಾದದ್ದು. ಯಾರೇ ಆಗಲಿ ಪಕ್ಷಾಂತರ ಮಾಡುವುದು ತಪ್ಪು ಎನ್ನುವ ಅರ್ಥದಲ್ಲಿ ಮಾತನಾಡಿದ್ದೇನೆ. ಇದರ ಹೊರತು ಬಿಜೆಪಿ ಬಗ್ಗೆ ಯಾವುದೇ ಅಸಮಾಧಾನ ವ್ಯಕ್ತಪಡಿಸಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ:  ಪಿಎಸ್‍ಐ ಅಕ್ರಮ – ಕೈ ನಾಯಕರು ಗಾಳಿಯಲ್ಲಿ ಗುಂಡು ಹೊಡೆದಿದ್ದಾರೆ: ಅಶ್ವಥ್ ನಾರಾಯಣ

ನಾನು, ಬಿಜೆಪಿಗೆ ಬಂದಿರುವುದನ್ನು ತಪ್ಪು ಎಂದು ಭಾವಿಸಿಯೂ ಇಲ್ಲ. ಹಾಗೆ ನಾನು ಹೇಳಿಯೂ ಇಲ್ಲ. ಬಿಜೆಪಿಯಲ್ಲಿ ನನಗೆ ಯಾವುದೇ ಅಸಮಾಧಾನ ಇಲ್ಲ. ಪಕ್ಷ ಮತ್ತು ನಾಯಕರು ನನ್ನನ್ನು ವಿಶ್ವಾಸದಿಂದ ನಡೆಸಿಕೊಳ್ಳುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *