ಸಚಿವರಿಂದ ನನಗೆ ಕಿರುಕುಳ – ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆಗೆ ಶರಣು

By
1 Min Read

ಕಲಬುರಗಿ: ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಂದ ಕಿರುಕುಳಕ್ಕೊಳಗಾಗಿರುವುದಾಗಿ ಆರೋಪಿಸಿ ಬಿಜೆಪಿ (BJP) ಕಾರ್ಯಕರ್ತ (Activist) ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ ಕಲಬುರಗಿ (Kalaburagi) ಜಿಲ್ಲೆಯ ಚಿಂಚೋಳಿ (Chincholi) ತಾಲೂಕಿನ ಶಿರೋಳ್ಳಿ ಗ್ರಾಮದಲ್ಲಿ ನಡೆದಿದೆ.

ಶಿವಕುಮಾರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಕಾರ್ಯಕರ್ತ. ನನ್ನ ಸಂಬಂಧಿ ನರಸಪ್ಪ ಎಂಬವರ ಹೊಲಕ್ಕೆ ಹೋಗಿ ಕೈ ಕಾರ್ಯಕರ್ತರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ಕಾಂಗ್ರೆಸ್ (Congress) ಕಾರ್ಯಕರ್ತರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದೇನೆ ಎಂದು ಆತ್ಮಹತ್ಯೆಗೂ ಮುನ್ನ ಶಿವಕುಮಾರ್ ಮೂರು ಆಡಿಯೋದಲ್ಲಿ ಹೇಳಿದ್ದಾರೆ. ಇದನ್ನೂ ಓದಿ: ಯಾವುದೇ ಅಪರಾಧ ಮಾಡಿಲ್ಲ, ಹಾಗಾಗಿ ಟ್ರಬಲ್ ಇಲ್ಲ: ಡಿಕೆ ಸುರೇಶ್

ಆತ್ಮಹತ್ಯೆಗೂ ಮುನ್ನ ಮೂರು ಆಡಿಯೋ (Audio) ರೆಕಾರ್ಡ್ ಮಾಡಿರುವ ಶಿವಕುಮಾರ್ ತನ್ನ ಸಾವಿಗೆ ಸಚಿವ ಶರಣಪ್ರಕಾಶ್ ಪಾಟೀಲ್ ನೇರ ಕಾರಣ ಎಂದು ಆರೋಪಿಸಿದ್ದಾರೆ. ನಾನು ಹಿಂದೂ ಹುಲಿಯಾಗಿದ್ದೇನೆ, ಹಿಂದೂ ಹುಲಿಯಾಗಿಯೇ ಸಾಯುತ್ತೇನೆ. ಹಿಂದೂ ಧರ್ಮದ ಬಗ್ಗೆ ಎಲ್ಲಿಯೂ ಮಾತನಾಡಬಾರದು. ಮಾತಾಡಿದರೆ ಇವರಿಗೆ ಬೆಂಕಿ ಬಿಳುತ್ತದೆ. ಹಾಗಾಗಿ ನನ್ನ ಸಾವಿಗೆ ಕಾಂಗ್ರೆಸ್ ಕಾರ್ಯಕರ್ತರು, ಸಚಿವ ಶರಣಪ್ರಕಾಶ್ ಪಾಟೀಲ್ (Sharanprakash Patil) ಕಾರಣ ಎಂದು ಆರೋಪಿಸಿ ಆಡಿಯೋ ರೆಕಾರ್ಡ್ ಮಾಡಿ ಕಳುಹಿಸಿದ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಜೆಡಿಎಸ್‌ನಿಂದ ಸಿಎಂ ಇಬ್ರಾಹಿಂ ಉಚ್ಛಾಟನೆ

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್