ನಾನು ಬಿಜೆಪಿಗೆ ಮತ್ತೆ ಸೇರಲ್ಲ, ಇದೆಲ್ಲಾ ಬಳ್ಳಾರಿಯವರ ತಂತ್ರ: ಶಾಸಕ ತಿಪ್ಪೇಸ್ವಾಮಿ ಗರಂ

Public TV
1 Min Read

ಚಿತ್ರದುರ್ಗ: ನನ್ನನ್ನು ಇದುವರೆಗೂ ಯಾರು ಸಂಪರ್ಕಿಸಿಲ್ಲ ಮತ್ತು ನಾನು ಬಿಜೆಪಿಗೆ ಮತ್ತೆ ಸೇರಲ್ಲ. ಬಳ್ಳಾರಿಯವರ ಕುತಂತ್ರದಿಂದ ನನಗೆ ಟಿಕೆಟ್ ತಪ್ಪಿದೆ. ಆದ್ರೆ ಇವರ ಆಟ ಇಲ್ಲಿ ನಡೆಯಲ್ಲ ಅಂತಾ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ತಿಪ್ಪೇಸ್ವಾಮಿ ಕಿಡಿಕಾರಿದ್ದಾರೆ.

ಸಂಸದ ಶ್ರೀರಾಮುಲು ವಿರುದ್ಧ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ತಿಪ್ಪೇಸ್ವಾಮಿ ಅವರು ಈಗಾಗಲೇ ಪಕ್ಷೇತರ ಅಭ್ಯರ್ಥಿಯಾಗಿ ಮೊಳಕಾಲ್ಮೂರು ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿ, ಕಣದಿಂದ ಹಿಂದೆ ಸರಿಯುವಂತೆ ತಿಪ್ಪೇಸ್ವಾಮಿ ಅವರ ಮನವೊಲಿಸಲು ಮುಂದಾಗಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಇದನ್ನೂ ಓದಿ: ನಾಲ್ಕು ಕಡೆ ಕಲ್ಲು ತೂರಾಡಿ, ಇಲ್ಲದಿದ್ರೆ ಸುಮ್ಮನಿರಿ…- ತಿಪ್ಪೇಸ್ವಾಮಿಯಿಂದ ಬೆಂಬಲಿಗರಿಗೆ ಪ್ರಚೋದನೆ

ತಮ್ಮ ಬಗ್ಗೆ ಹುಟ್ಟಿಕೊಂಡಿರುವ ಮಾತುಗಳಿಗೆ ಸ್ಪಷ್ಟನೆ ನೀಡಿದ ತಿಪ್ಪೇಸ್ವಾಮಿ, ನನ್ನ ಬೆಂಬಲಿಗರು ಮತ್ತು ಮತದಾರರಲ್ಲಿ ಗೊಂದಲ ಮೂಡಿಸಲು ಈ ರೀತಿಯ ಸುದ್ದಿಗಳನ್ನು ಹರಿಬಿಡಲಾಗುತ್ತಿದೆ. ಈ ಕೆಲಸವನ್ನು ಬಳ್ಳಾರಿಯವ್ರೆ ಮಾಡ್ತಿದ್ದಾರೆ ಅಂತಾ ಆರೋಪಿಸಿದ್ರು. ಇದನ್ನೂ ಓದಿ: ನೀನು ಗಂಡಸಾಗಿದ್ರೆ, ಮೊಳಕಾಲ್ಮೂರಲ್ಲಿ ಗೆದ್ದು ತೋರ್ಸು ನಾನು ನೋಡ್ತಿನಿ-ಶ್ರೀರಾಮುಲುಗೆ ಸವಾಲೆಸೆದ ಶಾಸಕ ತಿಪ್ಪೇಸ್ವಾಮಿ

ಇದನ್ನೂ ಓದಿ:  ಮಾತು ಕೊಟ್ಟು ಮೋಸ ಮಾಡಿದ್ರು ಶ್ರೀರಾಮುಲು-ತಿಪ್ಪೇಸ್ವಾಮಿ ಬೆಂಬಲಿಗರ ಆಕ್ರೋಶ: ನೀವೇ ವಿಡಿಯೋ ನೋಡಿ

Share This Article
Leave a Comment

Leave a Reply

Your email address will not be published. Required fields are marked *