ಎಲ್ಲ ಆರೋಪಿಗಳಿಗೆ ನಮ್ಮ ಮಗನ ರೀತಿಯಲ್ಲಿಯೇ ಶಿಕ್ಷೆ ಕೊಡುತ್ತೇನೆ: ಹರ್ಷನ ತಾಯಿ

Public TV
1 Min Read

– ನಮ್ಮ ಮಗನ ಸಾವಿಗೆ ನ್ಯಾಯ ಸಿಗುವ ನಂಬಿಕೆ ಇಲ್ಲ
– ಆರೋಪಿಗಳಿಗೆ ಸೌಲಭ್ಯ ಕೊಟ್ಟ ಅಧಿಕಾರಿಗಳ ಅಮಾನತು ಮಾಡಬೇಕು

ಶಿವಮೊಗ್ಗ: ಎಲ್ಲ ಆರೋಪಿಗಳಿಗೆ ನಮ್ಮ ಮಗನ ರೀತಿಯಲ್ಲಿಯೇ ಶಿಕ್ಷೆ ಕೊಡುತ್ತೇನೆ ಎಂದು ಹರ್ಷನ ತಾಯಿ ಪದ್ಮ ಆಕ್ರೋಶ ವ್ಯಕ್ತಪಡಿಸಿದರು.

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಹರ್ಷನ ಕೊಲೆ ಆರೋಪಿಗಳು ಮೊಬೈಲ್ ಬಳಕೆ ವಿಚಾರವಾಗಿ ಪದ್ಮ ಅವರು ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದು, ಈ ಪ್ರಕರಣ ನೋಡಿದರೆ ನಮ್ಮ ಮಗನ ಸಾವಿಗೆ ನ್ಯಾಯ ಸಿಗುವ ನಂಬಿಕೆ ಇಲ್ಲ. ಅಧಿಕಾರಿಗಳು ಏನು ಮಾಡುತ್ತಿದ್ದಾರೆ. ಆರೋಪಿಗಳಿಗೆ ಸೌಲಭ್ಯ ಕೊಟ್ಟ ಅಧಿಕಾರಿಗಳ ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.

ಅಧಿಕಾರಿಗಳಿಂದ ಆರೋಪಿಗಳಿಗೆ ಶಿಕ್ಷೆ ಕೊಡಲು ಸಾಧ್ಯವಾಗದಿದ್ದರೆ ನಮಗೆ ಒಪ್ಪಿಸಿ. ಎಲ್ಲ ಆರೋಪಿಗಳಿಗೆ ನಮ್ಮ ಮಗನ ರೀತಿಯಲ್ಲಿಯೇ ಶಿಕ್ಷೆ ಕೊಡುತ್ತೇನೆ. ಆ ಮೂಲಕ ನಮ್ಮ ಮಗನ ಸಾವಿಗೆ ನ್ಯಾಯ ಪಡೆಯುತ್ತೇನೆ. ಹಿಂದುತ್ವ ಪರವಾಗಿ ಹೋರಾಡುವುದೇ ತಪ್ಪಾ? ಆರೋಪಿಗಳಿಗೆ ಜೈಲಿನಲ್ಲಿ ಈ ರೀತಿ ಸೌಲಭ್ಯ ನೋಡಿದರೆ ನ್ಯಾಯ ಸಿಗುವ ವಿಶ್ವಾಸವಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಜೈಲಿನಲ್ಲಿ ಮೊಬೈಲ್ ಬಳಸಿ ರೀಲ್ಸ್, ಟಿಕ್‍ಟಾಕ್ ಮಾಡಿದ ಹರ್ಷನ ಹಂತಕರು

ಒಟ್ಟಿನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಯಾವುದೂ ಸರಿಯಿಲ್ಲ. ಇಂದಿಗೂ ಅಲ್ಲಿ ಅಕ್ರಮಗಳು ನಡೆಯುತ್ತಿವೆ ಎಂಬ ಅಂಶ ಈ ಮೂಲಕ ಬಹಿರಂಗವಾಗಿದೆ. ಅಲ್ಲದೇ ತಪ್ಪಿತಸ್ಥ ಅಧಿಕಾರಿಗಳನ್ನು ಕೇವಲ ವರ್ಗಾವಣೆ ಮಾಡದೇ ಸೇವೆಯಿಂದಲೇ ಅಮಾನತು ಮಾಡಬೇಕು ಎಂದು ಹರ್ಷ ಕುಟುಂಬಸ್ಥರ ಆಗ್ರಹವಾಗಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *